ಮಾಜಿ ಶಾಸಕ ಸಂಜಯ್ ಪಾಟೀಲ ಮಾತನಾಡಿ, ‘ಮಕ್ಕಳಿಗೆ ಶಿಕ್ಷಣದ ಜೊತೆಗೆಸಂಸ್ಕಾರ ಕಲಿಸುವುದರಿಂದತಂದೆ, ತಾಯಿಯನ್ನು ವೃದ್ಧಾಶ್ರಮಕ್ಕೆ ಕಳಿಸುವುದನ್ನುತಡೆಯಬಹುದು. ಅದಕ್ಕಾಗಿ ಮಕ್ಕಳಿಗೆ ಮನೆಯಲ್ಲಿ ಜೈನ ಧರ್ಮದ ತತ್ವಗಳನ್ನು ತಿಳಿಸಿ, ಮುನಿಗಳಸಂದೇಶ ಕೇಳಿಸಬೇಕು.ಜೈನ ಧರ್ಮದ ಜನಸಂಖ್ಯೆ ಕಡಿಮೆ ಇದ್ದರೂ ಧರ್ಮದ ಕಾರ್ಯಕ್ರಮಗಳಲ್ಲಿ ಶಕ್ತಿತೋರಿಸುವ ಕೆಲಸ ಆಗುತ್ತಿದೆ’ ಎಂದು ನುಡಿದರು.