ವೃತ್ತ ಪೊಲೀಸ್ ನಿರೀಕ್ಷಕ ರೇಣುಕಾಪ್ರಸಾದ್ ಮಾತನಾಡಿ,‘ ಅಪಘಾತ ತಪ್ಪಿಸುವುದು ಮತ್ತು ಸುಗಮ ವಾಹನಗಳ ಸಂಚಾರಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಸೂಚನಾ ಫಲಕ ಅಳವಡಿಸಲಾಗುತ್ತಿದೆ. ಇದರಿಂದ ವಾಹನಸವಾರರು ಹಾಗೂ ಪಾದಚಾರಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಮದ್ಯ ಸೇವಿಸಿ ವಾಹನಚಾಲನೆ ಮಾಡುವುದು, ಮೊಬೈಲ್ನಲ್ಲಿ ಮಾತನಾಡುವುದು ಹಾಗೂ ಹೆಲ್ಮೆಟ್ ಧರಿಸದಿರುವುದುಅಪಘಾತಕ್ಕೆ ಆಹ್ವಾನ ನೀಡುತ್ತದೆ. ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು. ಪ್ರಮುಖ ರಸ್ತೆಗಳಲ್ಲಿ ಸುತ್ತಾಡಿ, ಎಲ್ಲೆಲ್ಲಿ ಸೂಚನಾ ಫಲಕ ಅಳವಡಿಸಬೇಕು ಎಂಬುದನ್ನು ಈಗಾಗಲೇ ಗುರುತಿಸಲಾಗಿದೆ’ ಎಂದುತಿಳಿಸಿದರು.