ಈ ಬಾರಿ ಹಾಸನಾಂಬ ದರ್ಶನೋತ್ಸವ ಅ. 17 ರಿಂದ 29 ರ ವರೆಗೆ ಇರಲಿದೆ. ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್ ನಾಗರಾಜ್, ತಹಶೀಲ್ದಾರ್ ಮೇಘನಾ, ನಗರಸಭೆ ಆಯುಕ್ತ ಪರಮೇಶ್, ಮುಜರಾಯಿ ಇಲಾಖೆ ತಹಶೀಲ್ದಾರ್ ಶಾರದಾಂಬ ಇದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಗಿರೀಶ್, ಜಾತ್ರಾ ಮಹೋತ್ಸವಕ್ಕೂ ಮುನ್ನ ಜನಪ್ರತಿನಿಧಿಗಳು, ಅಧಿಕಾರಿಗಳು, ಮಾಧ್ಯಮ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಹೇಳಿದರು.