ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆತ್ತೂರು: ಹಾವು ಕಚ್ಚಿ ಬಾಲಕ ಸಾವು

Last Updated 1 ಸೆಪ್ಟೆಂಬರ್ 2020, 14:20 IST
ಅಕ್ಷರ ಗಾತ್ರ

ಹೆತ್ತೂರು: ಸಮೀಪದ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಹಳ್ಳಿ ಗ್ರಾಮದಲ್ಲಿ ಹಾವು ಕಚ್ಚಿ ಬಾಲಕ ಮೃತಪಟ್ಟಿದ್ದಾನೆ.

ಗ್ರಾಮದ ಶಶಿಕಲಾ ಅವರ ಪುತ್ರ ನಿಶಾಂತ (12) ಮೃತ ಬಾಲಕ. ಸೋಮವಾರ ಸಂಜೆ ಮನೆಯ ಮುಂಭಾಗದ ಕಾಫಿ ತೋಟದಲ್ಲಿ ಹಾವು ಕಚ್ಚಿದ್ದು, ಚಿಕಿತ್ಸೆಗಾಗಿ ಸಕಲೇಶಪುರದ ಕ್ರಾಫರ್ಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾನೆ.

ಬಾಲಕ ವನಗೂರು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದನು. ಒಂದು ವರ್ಷದ ಹಿಂದೆ ಈತನ ತಂದೆ ಸಾವಿನ್ನಪ್ಪಿದ್ದರು. ಯಸಳೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT