<p><strong>ಅರಕಲಗೂಡು</strong>: ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ಬೆಂಗಳೂರಿನ ಟೊಯೋಟಾ ಕಿರ್ಲೊಸ್ಕರ್ ಕಂಪನಿ ಆಯೋಜಿಸಿದ್ದ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯಲ್ಲಿ ಅಪ್ರೆಂಟಿಸ್ ತರಬೇತಿಗೆ 150 ಐಟಿಐ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಉದ್ಯೋಗ ಮಾಹಿತಿ ಅಧಿಕಾರಿ ಎ.ಎಸ್. ಯೋಗನಾಥ್ ತಿಳಿಸಿದ್ದಾರೆ.</p>.<p>ಲಿಖಿತ ಪರೀಕ್ಷೆ ಮತ್ತು ಸಂದರ್ಶನಕ್ಕೆ ಹಾಜರಾಗಿದ್ದ 167 ಅಭ್ಯರ್ಥಿಗಳಲ್ಲಿ 17 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಅನರ್ಹಗೊಂಡು ಅಂತಿಮವಾಗಿ 150 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದವರಿಗೆ ವೈದ್ಯಕೀಯ ತಪಾಸಣೆ ನಡೆಸಿ ಆಗಸ್ಟ್ ಎರಡನೆ ವಾರದಲ್ಲಿ ತರಬೇತಿಗೆ ಹಾಜರಾಗಲು ಸೂಚಿಸಲಾಯಿತು.</p>.<p>ಆಯ್ಕೆ ಪ್ರಕ್ರಿಯೆಯನ್ನು ಟೊಯೋಟಾ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳಾದ ಅಭಿಷೇಕ್, ಪ್ರದೀಪ್, ಪ್ರಭಾಕರ್, ಚಂದು ಮತ್ತು ಇತರೆ ಅಧಿಕಾರಿಗಳು ನಡೆಸಿದರು. ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿ ವರ್ಷ ಈ ರೀತಿಯ ಕ್ಯಾಂಪಸ್ ಸಂದರ್ಶನವನ್ನು ನಡೆಸುವುದರಿಂದ ಐಟಿಐ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ಪಡೆಯಲು ಅನುಕೂಲವಾಗುತ್ತದೆಂದು ಹಾಜರಿದ್ದ ಹಲವಾರು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮತ್ತು ಪಕ್ಕದ ಜಿಲ್ಲೆಗಳಿಂದ ಐಟಿಐ ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು</strong>: ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ಬೆಂಗಳೂರಿನ ಟೊಯೋಟಾ ಕಿರ್ಲೊಸ್ಕರ್ ಕಂಪನಿ ಆಯೋಜಿಸಿದ್ದ ಸಂದರ್ಶನ ಮತ್ತು ಲಿಖಿತ ಪರೀಕ್ಷೆಯಲ್ಲಿ ಅಪ್ರೆಂಟಿಸ್ ತರಬೇತಿಗೆ 150 ಐಟಿಐ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಉದ್ಯೋಗ ಮಾಹಿತಿ ಅಧಿಕಾರಿ ಎ.ಎಸ್. ಯೋಗನಾಥ್ ತಿಳಿಸಿದ್ದಾರೆ.</p>.<p>ಲಿಖಿತ ಪರೀಕ್ಷೆ ಮತ್ತು ಸಂದರ್ಶನಕ್ಕೆ ಹಾಜರಾಗಿದ್ದ 167 ಅಭ್ಯರ್ಥಿಗಳಲ್ಲಿ 17 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಅನರ್ಹಗೊಂಡು ಅಂತಿಮವಾಗಿ 150 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದವರಿಗೆ ವೈದ್ಯಕೀಯ ತಪಾಸಣೆ ನಡೆಸಿ ಆಗಸ್ಟ್ ಎರಡನೆ ವಾರದಲ್ಲಿ ತರಬೇತಿಗೆ ಹಾಜರಾಗಲು ಸೂಚಿಸಲಾಯಿತು.</p>.<p>ಆಯ್ಕೆ ಪ್ರಕ್ರಿಯೆಯನ್ನು ಟೊಯೋಟಾ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳಾದ ಅಭಿಷೇಕ್, ಪ್ರದೀಪ್, ಪ್ರಭಾಕರ್, ಚಂದು ಮತ್ತು ಇತರೆ ಅಧಿಕಾರಿಗಳು ನಡೆಸಿದರು. ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿ ವರ್ಷ ಈ ರೀತಿಯ ಕ್ಯಾಂಪಸ್ ಸಂದರ್ಶನವನ್ನು ನಡೆಸುವುದರಿಂದ ಐಟಿಐ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ಪಡೆಯಲು ಅನುಕೂಲವಾಗುತ್ತದೆಂದು ಹಾಜರಿದ್ದ ಹಲವಾರು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮತ್ತು ಪಕ್ಕದ ಜಿಲ್ಲೆಗಳಿಂದ ಐಟಿಐ ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>