ಹಾಸನ: ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ಹುಂಡಿ ಹಣ ಹಾಗೂ ಟಿಕೆಟ್ ಮತ್ತಿತರ ಮೂಲಗಳಿಂದ ಒಟ್ಟು ₹1,54,37,940 ಹಣ ಸಂಗ್ರಹವಾಗಿದೆ.
ಹಾಸನಾಂಬೆ ದೇವಾಲಯದ ಹುಂಡಿಗಳಿಂದ ₹83,89,770 ಸಂಗ್ರಹವಾಗಿದ್ದರೆ, ಸಿದ್ದೇಶ್ವರ ದೇವಾಲಯದ ಒಂದು ಹುಂಡಿಯಿಂದ ₹6,50,355 ಕಾಣಿಕೆ ರೂಪದಲ್ಲಿಸಂಗ್ರಹವಾಗಿದೆ. ಅಲ್ಲದೆ, ಟಿಕೆಟ್ ಮಾರಾಟದಿಂದ ₹63,97,815 ಸಂಗ್ರಹವಾಗಿದೆ.
ದೇವಾಲಯದ ಆಡಳಿತಾಧಿಕಾರಿ ಬಿ.ಎ.ಜಗದೀಶ್, ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಿ.ಸಿ.ಟಿ.ವಿಕ್ಯಾಮೆರಾ ಕಣ್ಗಾವಲಿನಲ್ಲಿ ಬೆಳಿಗ್ಗೆ 8 ಗಂಟೆಗೆ ಹುಂಡಿ ಹಣ ಎಣಿಕೆ ಕಾರ್ಯ ಆರಂಭವಾಗಿ ಸಂಜೆ 4.30ಕ್ಕೆಮುಕ್ತಾಯಗೊಂಡಿತ್ತು.
ಅ.28ರಿಂದ ನ.6ರವರೆಗೆ ಹಾಸನಾಂಬ, ಸಿದ್ದೇಶ್ವರ ಜಾತ್ರಾ ಮಹೋತ್ಸವ ನಡೆದಿತ್ತು.ಬ್ಯಾಂಕ್ ಸಿಬ್ಬಂದಿ, ಕಂದಾಯ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ದೇವಾಲಯದಆಡಳಿತಾಧಿಕಾರಿ, ತಹಶೀಲ್ದಾರ್ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು. ಹುಂಡಿ ಹಣವನ್ನು ಬ್ಯಾಂಕ್ಗೆ ಜಮಾಮಾಡಲಾಯಿತು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಆದಾಯದಲ್ಲಿ ಏರಿಕೆಯಾಗಿದೆ. ಕಳೆದ ಬಾರಿ ಕೋವಿಡ್ ಕಾರಣಕ್ಕೆ ಸಾರ್ವಜನಿಕ ದರ್ಶನ ನಿಷೇಧ ಮಾಡಲಾಗಿತ್ತು. ಹಾಸನಾಂಬೆ ದೇವಾಲಯದ ಹುಂಡಿಗಳಿಂದ ₹21,34,052 ಹಾಗೂ ಸಿದ್ದೇಶ್ವರ ದೇವಾಲಯದ ಹುಂಡಿಯಿಂದ ₹1,45,720ಸಂಗ್ರಹವಾಗಿತ್ತು.