<p><strong>ಹಾಸನ:</strong> ಜಿಲ್ಲೆಯಲ್ಲಿ ಹೊಸದಾಗಿ 154 ಕೋವಿಡ್ ಪ್ರಕರಣ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 4426ಕ್ಕೆ ಏರಿಕೆಯಾಗಿದೆ. ನಾಲ್ಕು ಜನರ ಸಾವಿನೊಂದಿಗೆ ಮೃತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.</p>.<p>ಶೀತ ಜ್ವರ ಮಾದರಿ ಅನಾರೋಗ್ಯ ಮತ್ತು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 48 ವರ್ಷ, 86 ವರ್ಷದ ವೃದ್ಧ, 70 ವರ್ಷದ ಮಹಿಳೆ ಹಾಗೂ ಹೊಳೆನರಸೀಪುರ ತಾಲ್ಲೂಕಿನ 40 ವರ್ಷದ ಪುರುಷ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ನಿಯಮಾನುಸಾರ ಅಂತ್ಯ ಸಂಸ್ಕಾರ ನಡೆಸಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.</p>.<p>1849 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ ಹಾಗೂ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 54 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬಿಡುಗಡೆಯಾದ 124 ಜನರು ಸೇರಿ ಈವರೆಗೆ 2453 ಮಂದಿ ಗುಣಮುಖರಾಗಿದ್ದಾರೆ.</p>.<p>ಹೊಸದಾಗಿ ಅರಸೀಕೆರೆ 50, ಚನ್ನರಾಯಪಟ್ಟಣ 9, ಆಲೂರು 2, ಹಾಸನ 30, ಹೊಳೆನರಸೀಪುರ 22, ಅರಕಲಗೂಡು 28, ಬೇಲೂರು 5, ಸಕಲೇಶಪುರ 7, ಹಾಗೂ ಹೊರ ಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಿದರು.</p>.<p>ಉಸಿರಾಟದ ಸಮಸ್ಯೆ, ಶೀತ, ಜ್ವರ ಮಾದರಿ ಅನಾರೋಗ್ಯ, ಸೋಂಕಿತರ ಜತೆ ಸಂಪರ್ಕ ಹೊಂದಿದವರಿಗೆ ಸೋಂಕು ತಗುಲಿದೆ. ಕೆಲವು ಪ್ರಕರಣಗಳಲ್ಲಿ ಪ್ರಯಾಣದ ಇತಿಹಾಸವೇ ಇಲ್ಲ. ಆದರೂ ಕೋವಿಡ್ ಬಂದಿದೆ. ಸೋಂಕಿನ ಮೂಲ ಪತ್ತೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ ಹೊಸದಾಗಿ 154 ಕೋವಿಡ್ ಪ್ರಕರಣ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 4426ಕ್ಕೆ ಏರಿಕೆಯಾಗಿದೆ. ನಾಲ್ಕು ಜನರ ಸಾವಿನೊಂದಿಗೆ ಮೃತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.</p>.<p>ಶೀತ ಜ್ವರ ಮಾದರಿ ಅನಾರೋಗ್ಯ ಮತ್ತು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 48 ವರ್ಷ, 86 ವರ್ಷದ ವೃದ್ಧ, 70 ವರ್ಷದ ಮಹಿಳೆ ಹಾಗೂ ಹೊಳೆನರಸೀಪುರ ತಾಲ್ಲೂಕಿನ 40 ವರ್ಷದ ಪುರುಷ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ನಿಯಮಾನುಸಾರ ಅಂತ್ಯ ಸಂಸ್ಕಾರ ನಡೆಸಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.</p>.<p>1849 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ ಹಾಗೂ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 54 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬಿಡುಗಡೆಯಾದ 124 ಜನರು ಸೇರಿ ಈವರೆಗೆ 2453 ಮಂದಿ ಗುಣಮುಖರಾಗಿದ್ದಾರೆ.</p>.<p>ಹೊಸದಾಗಿ ಅರಸೀಕೆರೆ 50, ಚನ್ನರಾಯಪಟ್ಟಣ 9, ಆಲೂರು 2, ಹಾಸನ 30, ಹೊಳೆನರಸೀಪುರ 22, ಅರಕಲಗೂಡು 28, ಬೇಲೂರು 5, ಸಕಲೇಶಪುರ 7, ಹಾಗೂ ಹೊರ ಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಿದರು.</p>.<p>ಉಸಿರಾಟದ ಸಮಸ್ಯೆ, ಶೀತ, ಜ್ವರ ಮಾದರಿ ಅನಾರೋಗ್ಯ, ಸೋಂಕಿತರ ಜತೆ ಸಂಪರ್ಕ ಹೊಂದಿದವರಿಗೆ ಸೋಂಕು ತಗುಲಿದೆ. ಕೆಲವು ಪ್ರಕರಣಗಳಲ್ಲಿ ಪ್ರಯಾಣದ ಇತಿಹಾಸವೇ ಇಲ್ಲ. ಆದರೂ ಕೋವಿಡ್ ಬಂದಿದೆ. ಸೋಂಕಿನ ಮೂಲ ಪತ್ತೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>