ಅರಸೀಕೆರೆಯ 530 ಹಳ್ಳಿಗಳು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಒಳಪಟ್ಟಿದ್ದು, ಯೋಜನೆ ಆಗಸ್ಟ್ಗೆ ಪೂರ್ಣಗೊಳ್ಳಲಿದೆ. ಅರಸೀಕೆರೆ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಹಣಕಾಸಿನ ತೊಂದರೆ ಇಲ್ಲ. ಬರ ಪರಿಹಾರ ಹಣವನ್ನು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಬಿಡುಗಡೆ ಮಾಡಲಾಗಿದೆ. ನೀರಿನ ಬಿಲ್ಗಳು ಬಾಕಿ ಇಲ್ಲ. ಅರಸೀಕೆರೆಯಿಂದ ₹ 8 ಲಕ್ಷ, ಬೇಲೂರಿನಿಂದ ₹ 5 ಲಕ್ಷ ಹಣ ನೀರಿನ ಬಿಲ್ ಬಂದಿದೆ. ಅದನ್ನು ಪರಿಶೀಲಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.