‘ರಾಜ್ಯದಲ್ಲಿ ಹಿಂದೆ ಇದ್ದಿದ್ದು 10 ಪರ್ಸೆಂಟ್ ಸರ್ಕಾರ, ಈಗಿರುವುದು 20 ಪರ್ಸೆಂಟ್ ಕಮಿಷನ್ ಎಂದಿದ್ದಾರೆ. ಪ್ರಧಾನಿಗೆ ಬೆರಳ ತುದಿಯಲ್ಲಿಯೇ ಎಲ್ಲಾ ಮಾಹಿತಿಗಳು ಸಿಗುತ್ತವೆ. ಮೈತ್ರಿ ಸರ್ಕಾರ ಯಾವ ಯೋಜನೆ ಮತ್ತು ಕ್ಷೇತ್ರದಲ್ಲಿ ಕಮಿಷನ್ ಪಡೆದಿದೆ ಎಂಬುದನ್ನು ಸಾಬೀತು ಪಡಿಸಲಿ. ಇಲ್ಲವಾದರೆ ಜವಾಬ್ದಾರಿ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ಜನತೆ ಚುನಾಯಿಸಿರುವ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಸಂವಿಧಾನದ ಗಣತಂತ್ರ ವ್ಯವಸ್ಥೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಣ್ಣ, ತಮ್ಮಂದಿರು, ಕುಟುಂಬದ ರೀತಿ ಇರಬೇಕು. ಹೀಗಿರುವಾಗ ಒಂದು ರಾಜ್ಯದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿರುವುದನ್ನು ಸಹಿಸಲು ಆಗುವುದಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.