ಈ ಬಗ್ಗೆ ಮಂಜುನಾಥ ಅವರು ₹ 15ಸಾವಿರ ಪರಿಹಾರವನ್ನು ಕೊಡಿಸುವಂತೆ ಹಾಸನದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ಸಲ್ಲಿಸಿದ್ದರು. ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಚಂಚಲಾ ಸಿ.ಎಂ., ಸದಸ್ಯರಾದ ಎಚ್.ವಿ.ಮಹಾದೇವ, ಅನುಪಮಾ ಆರ್. ಅವರನ್ನು ಒಳಗೊಂಡ ಪೀಠವು ವಿಚಾರಣೆ ನಡೆಸಿ, ಮಂಜುನಾಥ ಅವರು ಸಲ್ಲಿಸಿದ್ದ ದಾಖಲಾತಿಗಳನ್ನು ಕೂಲಂಕಶವಾಗಿ ಪರಿಶೀಲಿಸಿತ್ತು.