ಹಾಸನ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಆರ್ಭಟ ತೀವ್ರಗೊಂಡಿದ್ದು, ಮೊದಲ ಬಾರಿಗೆ ದಾಖಲೆ ಸಂಖ್ಯೆಯಲ್ಲಿ ಸಾವಿನ ಪ್ರಕರಣ ವರದಿಯಾಗಿದೆ.
ಒಂದೇ ದಿನ 1,597 ಹೊಸ ಪ್ರಕರಣ ವರದಿಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 22 ಮಂದಿ ಮೃತಪಟ್ಟಿದ್ದಾರೆ. ಈವರೆಗಿನ ಒಟ್ಟಾರೆ ಸೋಂಕಿತರ ಸಂಖ್ಯೆ 55841 ದಾಟಿದ್ದು, ಮೃತರ ಸಂಖ್ಯೆ 703ಕ್ಕೆ ಏರಿಕೆಯಾಗಿದೆ. ಒಟ್ಟು 38750 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 16,388 ಸಕ್ರಿಯ ಪ್ರಕರಣಗಳ ಪೈಕಿ 123 ಜನರು ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.
ಹೊಸದಾಗಿ ಆಲೂರು ತಾಲ್ಲೂಕಿನಲ್ಲಿ 58, ಅರಕಲಗೂಡು 55, ಅರಸೀಕೆರೆ 436, ಬೇಲೂರು 118, ಚನ್ನರಾಯಪಟ್ಟಣ 248, ಹಾಸನ 387, ಹೊಳೆನರಸೀಪುರ 161, ಸಕಲೇಶಪುರ 120, ಇತರೆ ಜಿಲ್ಲೆಯ 14 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ತಿಳಿಸಿದರು.