<p><strong>ಹಾಸನ:</strong> ಜಿಲ್ಲೆಯಲ್ಲಿ ಬುಧವಾರ 255 ಜನರಿಗೆ ಕೋವಿಡ್ ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,986ಕ್ಕೆ ಏರಿಕೆಯಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಆರು ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 116 ಕ್ಕೆ ತಲುಪಿದೆ.</p>.<p>ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಾಸನ ತಾಲ್ಲೂಕಿನ 33 ವರ್ಷ, 75 ವರ್ಷದ ಪುರುಷ, 65 ವರ್ಷದ ಇಬ್ಬರು ಮಹಿಳೆಯರು, ಅರಕಲಗೂಡು ತಾಲ್ಲೂಕಿನ 67 ವರ್ಷ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ 65 ವರ್ಷದ ಪುರುಷರು ಮೃತಪಟ್ಟಿದ್ದಾರೆ. ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಹೇಳಿದರು.</p>.<p>47ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆಯಾಗಿಲ್ಲ. ಕೆಮ್ಮು, ನೆಗಡಿ, ಶೀತ ಮತ್ತು ಜ್ವರ ಲಕ್ಷಣ ಹೊಂದಿದ 46 ಜನರು ಆಸ್ಪತ್ರೆಗೆ ಬಂದು ಗಂಟಲು ದ್ರವ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪತ್ತೆಯಾಗಿದೆ. ಸೋಂಕಿತರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದವರಿಗೂ ಪಾಸಿಟಿವ್ ಬಂದಿದೆ ಎಂದರು.<br /><br />ಚೇತರಿಸಿಕೊಂಡ 162 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ಗುಣಮುಖರ ಸಂಖ್ಯೆ 1688 ತಲುಪಿದೆ. 2181 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ ಹಾಗೂ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 49 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.</p>.<p>ಹೊಸದಾಗಿ ಅರಸೀಕೆರೆ 24, ಚನ್ನರಾಯಪಟ್ಟಣ 35, ಆಲೂರು 2, ಹಾಸನ 112, ಅರಕಲಗೂಡು 26, ಬೇಲೂರು 21, ಹೊಳೆನರಸೀಪುರ, ಸಕಲೇಶಪುರ ತಾಲ್ಲೂಕು ಹಾಗೂ ಹೊರ ಜಿಲ್ಲೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ ಬುಧವಾರ 255 ಜನರಿಗೆ ಕೋವಿಡ್ ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,986ಕ್ಕೆ ಏರಿಕೆಯಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಆರು ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 116 ಕ್ಕೆ ತಲುಪಿದೆ.</p>.<p>ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಾಸನ ತಾಲ್ಲೂಕಿನ 33 ವರ್ಷ, 75 ವರ್ಷದ ಪುರುಷ, 65 ವರ್ಷದ ಇಬ್ಬರು ಮಹಿಳೆಯರು, ಅರಕಲಗೂಡು ತಾಲ್ಲೂಕಿನ 67 ವರ್ಷ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ 65 ವರ್ಷದ ಪುರುಷರು ಮೃತಪಟ್ಟಿದ್ದಾರೆ. ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಹೇಳಿದರು.</p>.<p>47ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆಯಾಗಿಲ್ಲ. ಕೆಮ್ಮು, ನೆಗಡಿ, ಶೀತ ಮತ್ತು ಜ್ವರ ಲಕ್ಷಣ ಹೊಂದಿದ 46 ಜನರು ಆಸ್ಪತ್ರೆಗೆ ಬಂದು ಗಂಟಲು ದ್ರವ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪತ್ತೆಯಾಗಿದೆ. ಸೋಂಕಿತರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದವರಿಗೂ ಪಾಸಿಟಿವ್ ಬಂದಿದೆ ಎಂದರು.<br /><br />ಚೇತರಿಸಿಕೊಂಡ 162 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ಗುಣಮುಖರ ಸಂಖ್ಯೆ 1688 ತಲುಪಿದೆ. 2181 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ ಹಾಗೂ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 49 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.</p>.<p>ಹೊಸದಾಗಿ ಅರಸೀಕೆರೆ 24, ಚನ್ನರಾಯಪಟ್ಟಣ 35, ಆಲೂರು 2, ಹಾಸನ 112, ಅರಕಲಗೂಡು 26, ಬೇಲೂರು 21, ಹೊಳೆನರಸೀಪುರ, ಸಕಲೇಶಪುರ ತಾಲ್ಲೂಕು ಹಾಗೂ ಹೊರ ಜಿಲ್ಲೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>