ಜಿಲ್ಲೆಯ ಅನೇಕ ಸಮಸ್ಯೆಗಳ ಕುರಿತು ಮುಂದಿನ ವಾರದಲ್ಲಿ ಕಂದಾಯ, ಅರಣ್ಯ, ಲೋಕೋಪಯೋಗಿಸಚಿವರು ಒಳಗೊಂಡಂತೆ ಜಿಲ್ಲೆಯ ಜನ ಪ್ರತಿನಿಧಿಗಳು, ಕಾಫಿ ಬೆಳೆಗಾರರು, ವಿವಿಧ ಸಂಘ ಸಂಸ್ಥೆಗಳಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. ಕಾಡಾನೆ, ಮಳೆಹಾನಿ, ರಸ್ತೆ ಇತ್ಯಾದಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕ್ರಮಕೈಗೊಳ್ಳಲಾಗುವುದು ಎಂದರು.