<p><strong>ಹಾಸನ: </strong>ಟಿವಿ ಚಾನಲ್ಗಳಿಗೆ ಪ್ರತ್ಯೇಕ ದರ ನಿಗದಿಪಡಿಸುವ ಮೂಲಕ ಕೇಂದ್ರ ಸರ್ಕಾರ ಕೇಬಲ್ ಆಪರೇಟರ್ಗಳು ಹಾಗೂ ಗ್ರಾಹಕರನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನ ಮಾಡುತ್ತಿದೆ ಎಂದು ಜಿಲ್ಲಾ ಡೆನ್ ಕೇಬಲ್ ಆಪರೇಟರ್ಸ್ ಸಂಘದ ಅಧ್ಯಕ್ಷ ಚಂದ್ರೇಗೌಡ ಆರೋಪಿಸಿದರು.</p>.<p>ಡಿ.29ರಿಂದ ಎಲ್ಲ ಉಚಿತ ಚಾನಲ್ ಬಿಟ್ಟು ಉಳಿದ ಚಾನಲ್ಗಳು ಸ್ಥಗಿತಗೊಳ್ಳಲಿವೆ. ಈ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಇದುವರೆಗೂ ₹ 225 ರಿಂದ 250 ಕೇಬಲ್ ಶುಲ್ಕ ಸಂಗ್ರಹಿಸಲಾಗುತ್ತಿದೆ. ಹೊಸ ನಿಯಮ ಜಾರಿಗೆ ಬಂದರೆ ಕನಿಷ್ಠ ₹ 1500 ಪಾವತಿಸಬೇಕಾಗುತ್ತದೆ. ದೊಡ್ಡ ಮೊತ್ತದ ಹಣ ನೀಡಿ ಯಾರೂ ಟಿ. ವಿ ನೋಡಲು ಬಯಸುವುದಿಲ್ಲ. ಹಾಗಾಗಿ ಕೇಬಲ್ ಆಪರೇಟರ್ಗಳು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ. ಕೇಂದ್ರದ ನಿರ್ಧಾರ ಗ್ರಾಹಕರ ಮೇಲೆ ಹೊರೆ ಬೀಳಲಿದ್ದು, ಎಲ್ಲರೂ ಇದನ್ನು ವಿರೋಧಿಸಬೇಕು’ ಎಂದು ಮನವಿ ಮಾಡಿದರು.<br />ಅಮೋಘ್ ವಾಹಿನಿ ವ್ಯವಸ್ಥಾಪಕ ಜ್ಞಾನೇಶ್ ಬಾಬು, ಸಂಘದ ಉಪಾಧ್ಯಕ್ಷ ಶಬೀರ್ ಅಹಮದ್, ಖಜಾಂಚಿ ಮಲ್ಲಿಕಾರ್ಜುನ್, ಕಾರ್ಯದರ್ಶಿ ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಟಿವಿ ಚಾನಲ್ಗಳಿಗೆ ಪ್ರತ್ಯೇಕ ದರ ನಿಗದಿಪಡಿಸುವ ಮೂಲಕ ಕೇಂದ್ರ ಸರ್ಕಾರ ಕೇಬಲ್ ಆಪರೇಟರ್ಗಳು ಹಾಗೂ ಗ್ರಾಹಕರನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನ ಮಾಡುತ್ತಿದೆ ಎಂದು ಜಿಲ್ಲಾ ಡೆನ್ ಕೇಬಲ್ ಆಪರೇಟರ್ಸ್ ಸಂಘದ ಅಧ್ಯಕ್ಷ ಚಂದ್ರೇಗೌಡ ಆರೋಪಿಸಿದರು.</p>.<p>ಡಿ.29ರಿಂದ ಎಲ್ಲ ಉಚಿತ ಚಾನಲ್ ಬಿಟ್ಟು ಉಳಿದ ಚಾನಲ್ಗಳು ಸ್ಥಗಿತಗೊಳ್ಳಲಿವೆ. ಈ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಇದುವರೆಗೂ ₹ 225 ರಿಂದ 250 ಕೇಬಲ್ ಶುಲ್ಕ ಸಂಗ್ರಹಿಸಲಾಗುತ್ತಿದೆ. ಹೊಸ ನಿಯಮ ಜಾರಿಗೆ ಬಂದರೆ ಕನಿಷ್ಠ ₹ 1500 ಪಾವತಿಸಬೇಕಾಗುತ್ತದೆ. ದೊಡ್ಡ ಮೊತ್ತದ ಹಣ ನೀಡಿ ಯಾರೂ ಟಿ. ವಿ ನೋಡಲು ಬಯಸುವುದಿಲ್ಲ. ಹಾಗಾಗಿ ಕೇಬಲ್ ಆಪರೇಟರ್ಗಳು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ. ಕೇಂದ್ರದ ನಿರ್ಧಾರ ಗ್ರಾಹಕರ ಮೇಲೆ ಹೊರೆ ಬೀಳಲಿದ್ದು, ಎಲ್ಲರೂ ಇದನ್ನು ವಿರೋಧಿಸಬೇಕು’ ಎಂದು ಮನವಿ ಮಾಡಿದರು.<br />ಅಮೋಘ್ ವಾಹಿನಿ ವ್ಯವಸ್ಥಾಪಕ ಜ್ಞಾನೇಶ್ ಬಾಬು, ಸಂಘದ ಉಪಾಧ್ಯಕ್ಷ ಶಬೀರ್ ಅಹಮದ್, ಖಜಾಂಚಿ ಮಲ್ಲಿಕಾರ್ಜುನ್, ಕಾರ್ಯದರ್ಶಿ ಶಶಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>