‘ಜಿಲ್ಲೆಯಲ್ಲಿ ಇದುವರೆಗೂ ₹ 225 ರಿಂದ 250 ಕೇಬಲ್ ಶುಲ್ಕ ಸಂಗ್ರಹಿಸಲಾಗುತ್ತಿದೆ. ಹೊಸ ನಿಯಮ ಜಾರಿಗೆ ಬಂದರೆ ಕನಿಷ್ಠ ₹ 1500 ಪಾವತಿಸಬೇಕಾಗುತ್ತದೆ. ದೊಡ್ಡ ಮೊತ್ತದ ಹಣ ನೀಡಿ ಯಾರೂ ಟಿ. ವಿ ನೋಡಲು ಬಯಸುವುದಿಲ್ಲ. ಹಾಗಾಗಿ ಕೇಬಲ್ ಆಪರೇಟರ್ಗಳು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ. ಕೇಂದ್ರದ ನಿರ್ಧಾರ ಗ್ರಾಹಕರ ಮೇಲೆ ಹೊರೆ ಬೀಳಲಿದ್ದು, ಎಲ್ಲರೂ ಇದನ್ನು ವಿರೋಧಿಸಬೇಕು’ ಎಂದು ಮನವಿ ಮಾಡಿದರು.
ಅಮೋಘ್ ವಾಹಿನಿ ವ್ಯವಸ್ಥಾಪಕ ಜ್ಞಾನೇಶ್ ಬಾಬು, ಸಂಘದ ಉಪಾಧ್ಯಕ್ಷ ಶಬೀರ್ ಅಹಮದ್, ಖಜಾಂಚಿ ಮಲ್ಲಿಕಾರ್ಜುನ್, ಕಾರ್ಯದರ್ಶಿ ಶಶಿಕುಮಾರ್ ಇದ್ದರು.