<p>ಹಾಸನ: ನಗರದ ತಣ್ಣೀರುಹಳ್ಳಕಲ್ಪತರು ರಸ್ತೆಯ ಕಟ್ಟೆಮನೆ ವಠಾರದ’ಜಯಸೂರ್ಯ ಅನುಗ್ರಹ’ ನಿಲಯದಲ್ಲಿ ಕಟ್ಟೆಮನೆ ಯಜಮಾನ ಎಚ್.ಪಿ.ಶಿವರುದ್ರಯ್ಯ, ಎಚ್.ಪಿ.ನಾರಾಯಣ ಹಾಗೂ ಸಿದ್ದಲಿಂಗಪ್ಪ ಪುಣ್ಯತಿಥಿ ಅಂಗವಾಗಿ ಭಾನುವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.</p>.<p>ಹಾಸನದ ಜೀವರಕ್ಷಾ ನಿಧಿಯಟೆಕ್ನಿಕಲ್ ಸೂಪರ್ವೈಸರ್ ಮೋಹನ್ ಇವರ ಸಹಯೋಗದಲ್ಲಿ ನಡೆದ ಶಿಬಿರವನ್ನು ಭಾರತ ಮಾತೆ ಫೋಟೋಗೆ ಅರ್ಚನೆ ಮಾಡುವ ಮೂಲಕ ನಗರದ ಸಂತ ಫಿಲೋಮಿನಾ ಕಾಲೇಜಿನ ಮನೋವಿಜ್ಞಾನ ಶಾಸ್ತ್ರದ ಉಪನ್ಯಾಸಕ ಎನ್.ಆರ್. ಪ್ರಶಾಂತ್ ಉದ್ಘಾಟಿಸಿದರು.</p>.<p>ಶಿಬಿರದಲ್ಲಿ 30ಕ್ಕೂ ಹೆಚ್ಚು ಜನ ಕಟ್ಟೆಮನೆ ಸದಸ್ಯರು ಹಾಗೂ ಸ್ನೇಹಿತರು ರಕ್ತದಾನ ಮಾಡಿದರು. ರಕ್ತದಾನ ಮಾಡಿದ ಸದಸ್ಯರಿಗೆ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಹಾಗೂ ಕಾಲೇಜಿನ ಉಪನ್ಯಾಸಕ ದಂಪತಿ ಡಾ.ಗೋವಿಂದ ಶರ್ಮ ಹಾಗೂ ಡಾ.ಅನುರಾಧ ಪ್ರಶಸ್ತಿ ಪತ್ರ ವಿತರಣೆ ಮಾಡಿದರು.</p>.<p>ಶಿಬಿರದಲ್ಲಿ ಕಟ್ಟೆಮನೆ ಸದಸ್ಯರು ಜ್ಞಾನೇಶ್ವರ, ಲಕ್ಷ್ಮೀಕಾಂತ, ನಾಗೇಂದ್ರ ಕಟ್ಟೆಮನೆ, ಮೋಹನ್ ಕುಮಾರ್, ದಿಲೀಪ್ ಕುಮಾರ್, ರಾಕೇಶ್, ಸಂಜಯ್, ವರುಣ್, ಕಾರ್ತಿಕ್, ಶಿವಸ್ವಾಮಿ, ಚರಣ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ನಗರದ ತಣ್ಣೀರುಹಳ್ಳಕಲ್ಪತರು ರಸ್ತೆಯ ಕಟ್ಟೆಮನೆ ವಠಾರದ’ಜಯಸೂರ್ಯ ಅನುಗ್ರಹ’ ನಿಲಯದಲ್ಲಿ ಕಟ್ಟೆಮನೆ ಯಜಮಾನ ಎಚ್.ಪಿ.ಶಿವರುದ್ರಯ್ಯ, ಎಚ್.ಪಿ.ನಾರಾಯಣ ಹಾಗೂ ಸಿದ್ದಲಿಂಗಪ್ಪ ಪುಣ್ಯತಿಥಿ ಅಂಗವಾಗಿ ಭಾನುವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.</p>.<p>ಹಾಸನದ ಜೀವರಕ್ಷಾ ನಿಧಿಯಟೆಕ್ನಿಕಲ್ ಸೂಪರ್ವೈಸರ್ ಮೋಹನ್ ಇವರ ಸಹಯೋಗದಲ್ಲಿ ನಡೆದ ಶಿಬಿರವನ್ನು ಭಾರತ ಮಾತೆ ಫೋಟೋಗೆ ಅರ್ಚನೆ ಮಾಡುವ ಮೂಲಕ ನಗರದ ಸಂತ ಫಿಲೋಮಿನಾ ಕಾಲೇಜಿನ ಮನೋವಿಜ್ಞಾನ ಶಾಸ್ತ್ರದ ಉಪನ್ಯಾಸಕ ಎನ್.ಆರ್. ಪ್ರಶಾಂತ್ ಉದ್ಘಾಟಿಸಿದರು.</p>.<p>ಶಿಬಿರದಲ್ಲಿ 30ಕ್ಕೂ ಹೆಚ್ಚು ಜನ ಕಟ್ಟೆಮನೆ ಸದಸ್ಯರು ಹಾಗೂ ಸ್ನೇಹಿತರು ರಕ್ತದಾನ ಮಾಡಿದರು. ರಕ್ತದಾನ ಮಾಡಿದ ಸದಸ್ಯರಿಗೆ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಹಾಗೂ ಕಾಲೇಜಿನ ಉಪನ್ಯಾಸಕ ದಂಪತಿ ಡಾ.ಗೋವಿಂದ ಶರ್ಮ ಹಾಗೂ ಡಾ.ಅನುರಾಧ ಪ್ರಶಸ್ತಿ ಪತ್ರ ವಿತರಣೆ ಮಾಡಿದರು.</p>.<p>ಶಿಬಿರದಲ್ಲಿ ಕಟ್ಟೆಮನೆ ಸದಸ್ಯರು ಜ್ಞಾನೇಶ್ವರ, ಲಕ್ಷ್ಮೀಕಾಂತ, ನಾಗೇಂದ್ರ ಕಟ್ಟೆಮನೆ, ಮೋಹನ್ ಕುಮಾರ್, ದಿಲೀಪ್ ಕುಮಾರ್, ರಾಕೇಶ್, ಸಂಜಯ್, ವರುಣ್, ಕಾರ್ತಿಕ್, ಶಿವಸ್ವಾಮಿ, ಚರಣ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>