<p><strong>ಹಾಸನ:</strong> ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ಡಿವೈಎಫ್ಐ ಹಾಗೂ ಎಸ್ಎಫ್ಐ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 30 ಯುನಿಟ್ ರಕ್ತ ಸಂಗ್ರಹವಾಯಿತು.</p>.<p>ಕೊರೊನಾ ಸಾಂಕ್ರಾಮಿಕ ವ್ಯಾಪಕವಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಸರ್ಕಾರದ ಲಾಕ್ ಡೌನ್ ಕಾರಣದಿಂದಾಗಿ ಬಡವರು ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಕಾಯಿಲೆಗಳು, ಅಪಘಾತಕ್ಕೆ ತುತ್ತಾದವರು ಹಾಗೂ ಗರ್ಭಿಣಿಯರು ಹೆರಿಗೆ ಸಮಯದಲ್ಲಿ ಜೀವ ಉಳಿಸಿಕೊಳ್ಳಲು ಜೀವ ರಕ್ಷಕ ರಕ್ತಕ್ಕಾಗಿ ಪರದಾಡುವ ಸ್ಥಿತಿಯುಂಟಾಗಿದೆ.</p>.<p>ಈ ಹಿನ್ನೆಲೆಯಲ್ಲಿ 'ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಮತ್ತು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)’ ಸಂಘಟನೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.</p>.<p>ಹಲವಾರು ಯುವಕರು ಹಾಗೂ ಯುವತಿಯರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ಇತರರಿಗೆ ಸ್ಪೂರ್ತಿಯಾದರು.</p>.<p>ಹಿಮ್ಸ್ ರಕ್ತ ನಿಧಿ ವೈದ್ಯಾಧಿಕಾರಿ ಡಾ.ನಾಗಲಕ್ಷ್ಮಿ ಮಾತನಾಡಿ, ಡಿವೈಎಫ್ಐ ಮತ್ತು ಎಸ್ಎಫ್ಐಸಂಘಟನೆಗಳು ಕೋವಿಡ್ ಕಾಲದ ಸಂಕಷ್ಟದಲ್ಲಿ ರಕ್ತದಾನ ಶಿಬಿರ ಆಯೋಜಿಸಿ ಸಮಾಜಕ್ಕೆಮಾದರಿಯಾಗಿವೆ. ಯುವಜನರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲುಮುಂದಾಗಬೇಕು. ಇದರಿಂದಾಗಿ ಹಲವಾರು ಜೀವಗಳನ್ನು ಉಳಿಸಬಹುದಾಗಿದೆ ಎಂದರು.</p>.<p>ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರಮೇಶ್, ಮುಖಂಡ ರಕ್ಷಿತಾ ಶಿಬಿರದ ನೇತೃತ್ವ ವಹಿಸಿದ್ದರು.</p>.<p>ರೈತ ಮುಖಂಡರಾದ ನವೀನ್ ಕುಮಾರ್ ಮತ್ತು ವಸಂತ್ ಕುಮಾರ್ ಭಾಗಿಯಾಗಿ ರಕ್ತದಾನ ಮಾಡಿದರು. ಸರ್ಕಾರಿ ಆಸ್ಪತ್ರೆಯ ರಕ್ತ ನಿಧಿ ಘಟಕದ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ಡಿವೈಎಫ್ಐ ಹಾಗೂ ಎಸ್ಎಫ್ಐ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 30 ಯುನಿಟ್ ರಕ್ತ ಸಂಗ್ರಹವಾಯಿತು.</p>.<p>ಕೊರೊನಾ ಸಾಂಕ್ರಾಮಿಕ ವ್ಯಾಪಕವಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಸರ್ಕಾರದ ಲಾಕ್ ಡೌನ್ ಕಾರಣದಿಂದಾಗಿ ಬಡವರು ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಕಾಯಿಲೆಗಳು, ಅಪಘಾತಕ್ಕೆ ತುತ್ತಾದವರು ಹಾಗೂ ಗರ್ಭಿಣಿಯರು ಹೆರಿಗೆ ಸಮಯದಲ್ಲಿ ಜೀವ ಉಳಿಸಿಕೊಳ್ಳಲು ಜೀವ ರಕ್ಷಕ ರಕ್ತಕ್ಕಾಗಿ ಪರದಾಡುವ ಸ್ಥಿತಿಯುಂಟಾಗಿದೆ.</p>.<p>ಈ ಹಿನ್ನೆಲೆಯಲ್ಲಿ 'ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಮತ್ತು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)’ ಸಂಘಟನೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.</p>.<p>ಹಲವಾರು ಯುವಕರು ಹಾಗೂ ಯುವತಿಯರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ಇತರರಿಗೆ ಸ್ಪೂರ್ತಿಯಾದರು.</p>.<p>ಹಿಮ್ಸ್ ರಕ್ತ ನಿಧಿ ವೈದ್ಯಾಧಿಕಾರಿ ಡಾ.ನಾಗಲಕ್ಷ್ಮಿ ಮಾತನಾಡಿ, ಡಿವೈಎಫ್ಐ ಮತ್ತು ಎಸ್ಎಫ್ಐಸಂಘಟನೆಗಳು ಕೋವಿಡ್ ಕಾಲದ ಸಂಕಷ್ಟದಲ್ಲಿ ರಕ್ತದಾನ ಶಿಬಿರ ಆಯೋಜಿಸಿ ಸಮಾಜಕ್ಕೆಮಾದರಿಯಾಗಿವೆ. ಯುವಜನರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲುಮುಂದಾಗಬೇಕು. ಇದರಿಂದಾಗಿ ಹಲವಾರು ಜೀವಗಳನ್ನು ಉಳಿಸಬಹುದಾಗಿದೆ ಎಂದರು.</p>.<p>ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರಮೇಶ್, ಮುಖಂಡ ರಕ್ಷಿತಾ ಶಿಬಿರದ ನೇತೃತ್ವ ವಹಿಸಿದ್ದರು.</p>.<p>ರೈತ ಮುಖಂಡರಾದ ನವೀನ್ ಕುಮಾರ್ ಮತ್ತು ವಸಂತ್ ಕುಮಾರ್ ಭಾಗಿಯಾಗಿ ರಕ್ತದಾನ ಮಾಡಿದರು. ಸರ್ಕಾರಿ ಆಸ್ಪತ್ರೆಯ ರಕ್ತ ನಿಧಿ ಘಟಕದ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>