<p><strong>ಹಾಸನ: </strong>ಜಿಲ್ಲೆಯಲ್ಲಿ ಗುರುವಾರ 31 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಸೋಂಕಿಗೆ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.</p>.<p>ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಸನ ತಾಲ್ಲೂಕಿನ 65 ವರ್ಷದ ಮಹಿಳೆಗೆ ಉಸಿರಾಟದ ಸಮಸ್ಯೆ<br />ಕಾಣಿಸಿಕೊಂಡಿತ್ತು. ಮಧುಮೇಹ, ರಕ್ತದೊತ್ತಡ, ಕಿಡ್ನಿ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಎರಡು ಬಾರಿ ಡಯಾಲಿಸಿಸ್ ನಡೆದಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದರು.</p>.<p>ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ಆಲೂರು ತಾಲ್ಲೂಕಿನ 1, ಅರಸೀಕೆರೆ 2, ಬೇಲೂರು 1, ಚನ್ನರಾಯಪಟ್ಟಣ 3, ಹಾಸನ 16, ಸಕಲೇಶಪುರ 6 ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿದ್ದಾರೆ. ಮೂವರು ಆರೋಗ್ಯ ಕೇಂದ್ರದ ಸಹಾಯಕರು, ಪೊಲೀಸ್ ಕಾನ್ಸ್ಟೆಬಲ್, ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿದವರು ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ಕೋವಿಡ್ ಬಂದಿದೆ.</p>.<p>ಈ ವರೆಗೆ 771 ಪ್ರಕರಣಗಳು ದೃಢಪಟ್ಟಿದ್ದು, 515 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 232 ಸಕ್ರಿಯ ಪ್ರಕರಣಗಳಿದ್ದು, 12 ಜನರು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಗುರುವಾರ 31 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಸೋಂಕಿಗೆ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.</p>.<p>ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಸನ ತಾಲ್ಲೂಕಿನ 65 ವರ್ಷದ ಮಹಿಳೆಗೆ ಉಸಿರಾಟದ ಸಮಸ್ಯೆ<br />ಕಾಣಿಸಿಕೊಂಡಿತ್ತು. ಮಧುಮೇಹ, ರಕ್ತದೊತ್ತಡ, ಕಿಡ್ನಿ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಎರಡು ಬಾರಿ ಡಯಾಲಿಸಿಸ್ ನಡೆದಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದರು.</p>.<p>ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ಆಲೂರು ತಾಲ್ಲೂಕಿನ 1, ಅರಸೀಕೆರೆ 2, ಬೇಲೂರು 1, ಚನ್ನರಾಯಪಟ್ಟಣ 3, ಹಾಸನ 16, ಸಕಲೇಶಪುರ 6 ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿದ್ದಾರೆ. ಮೂವರು ಆರೋಗ್ಯ ಕೇಂದ್ರದ ಸಹಾಯಕರು, ಪೊಲೀಸ್ ಕಾನ್ಸ್ಟೆಬಲ್, ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿದವರು ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ಕೋವಿಡ್ ಬಂದಿದೆ.</p>.<p>ಈ ವರೆಗೆ 771 ಪ್ರಕರಣಗಳು ದೃಢಪಟ್ಟಿದ್ದು, 515 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 232 ಸಕ್ರಿಯ ಪ್ರಕರಣಗಳಿದ್ದು, 12 ಜನರು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>