ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ಕರ ನಡುವೆಯೂ 310 ಬಸ್‌ ಸಂಚಾರ

ಸಹಜ ಸ್ಥಿತಿಗೆ ಕೆಎಸ್‌ಆರ್‌ಟಿಸಿ, 600ಕ್ಕೂ ಹೆಚ್ಚು ಚಾಲಕ, ನಿರ್ವಾಹಕರು ಹಾಜರು
Last Updated 18 ಏಪ್ರಿಲ್ 2021, 12:20 IST
ಅಕ್ಷರ ಗಾತ್ರ

ಹಾಸನ: ಆರನೇ ವೇತನ ಆಯೋಗ ವರದಿ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದ ನಡುವೆಯೂ ಭಾನುವಾರ ಜಿಲ್ಲೆಯಲ್ಲಿ 310 ಬಸ್‌ಗಳು ಸಂಚರಿಸಿದ್ದು,ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ.

ಏ.7ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವುದರಿಂದ ಬಸ್ ಸಂಚಾರ ಅಸ್ತವ್ಯಸ್ತಗೊಂಡು, ಕೋಟ್ಯಂತರ ರೂಪಾಯಿ ಆದಾಯಕ್ಕೂ ಹೊಡೆತ ಬಿದ್ದಿತ್ತು. ಈ ವರೆಗೆ ಹಾಸನ ವಿಭಾಗಕ್ಕೆ ₹5.50 ಕೋಟಿ ನಷ್ಟಸಂಭವಿಸಿದೆ. ಅಧಿಕಾರಿಗಳು ನೌಕರರು ಮನವೊಲಿಸುವ ಕಾರ್ಯ ಮುಂದುವರೆಸಿದ್ದು,ಹಂತ ಹಂತವಾಗಿ ಬಸ್‌ಗಳಸಂಚಾರ ಹೆಚ್ಚುತ್ತಿದೆ.

ಬೆಂಗಳೂರು, ಮೈಸೂರು, ಮಂಗಳೂರು, ಹೊಳೆನರಸೀಪುರ, ಅರಸೀಕೆರೆ, ಬೇಲೂರು, ಸಕಲೇಶಪುರ, ಅರಕಲಗೂಡು ಮಾರ್ಗದಲ್ಲಿ ಬಸ್‌ಗಳು ಸಂಚರಿಸಿವೆ. ಖಾಸಗಿ ವಾಹನದಲ್ಲಿ ಹೆಚ್ಚುಹಣ ನೀಡಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ತುಸು ನಿಟ್ಟಿಸಿರುವ ಬಿಡುವಂತಾಗಿದೆ.

ಹಾಸನ ವಿಭಾಗದಲ್ಲಿ ಎರಡು ಸಾವಿರ ನೌಕರರು ಕೆಲಸ ಮಾಡುತ್ತಿದ್ದು, 600ಕ್ಕೂ ಹೆಚ್ಚು ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಡಿಪೋ ನೌಕರರು ಸಹ ಕರ್ತವ್ಯಕ್ಕೆಮರಳುತ್ತಿದ್ದು, ಸಾರಿಗೆ ವ್ಯವಸ್ಥೆ ಹಳಿಗೆ ಮರಳುತ್ತಿದೆ.

ಮುಷ್ಕರ ಆರಂಭವಾದಾಗಿನಿಂದ ಕಿಡಿಗೇಡಿಗಳು ನಾಲ್ಕು ಸಾರಿಗೆ ಬಸ್‌ಗೆ ಕಲ್ಲುತ ತೂರಿ ನಷ್ಟ ಉಂಟು ಮಾಡಿದ್ದಾರೆ. ಮೈಸೂರಿನಿಂದ ಸಕಲೇಶಪುರಕ್ಕೆ ಬರುತ್ತಿದ್ದ ಬಸ್‌ಗೆ ಹಾಸನ ಹೊರವಲಯದ ಅಲ್ಲಾನಾ ಕಾಫಿ ಕ್ಯೂರಿಂಗ್‌ ಸಮೀಪ ಕಲ್ಲು ತೂರಲಾಗಿದೆ. ಬೇಲೂರಿನಿಂದ ಹಾಸನಕ್ಕೆ ಬರುತ್ತಿದ್ದ ಮತ್ತೊಂದುಕೆಎಸ್‌ಆರ್‌ಟಿಸಿ ಬಸ್‌ ಮೇಲೆ ಸಾಣೇನಹಳ್ಳಿ ಗಡಿ ಬಳಿ ಕಲ್ಲು ಹೊಡೆದಿದ್ದಾರೆ. ಈ ಸಂಬಂಧ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

‘ಖಾಸಗಿ ವಾಹನಗಳ ಸಂಖ್ಯೆ ಕಡಿಮೆ ಆಗಿದ್ದು, ಸಾರಿಗೆ ಸಂಸ್ಥೆ ಬಸ್‌ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಾಲಕ, ನಿರ್ವಾಹಕರು ಸಹ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಭಾನುವಾರ 310ಬಸ್‌ಗಳು ಸಂಚರಿಸಿವೆ. ಸೋಮವಾರ ಮತ್ತಷ್ಟು ಬಸ್‌ಗಳು ಸಂಚರಿಸಲಿವೆ’ ಎಂದು ನಿಲ್ದಾಣ ಮೇಲ್ವಿಚಾರಕ ಮಂಜುನಾಥ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT