ಸರ್ಕಾರಿ ಕಾಲೇಜಿನಲ್ಲಿ ಸೀಟುಗಳು ಭರ್ತಿಯಾಗಿಲ್ಲ ಎಂಬ ಕಾರಣ ನೀಡಿ ಕಳೆದ ವರ್ಷ ಆರಂಭವಾಗಿರುವ ಮೊಸಳೆ ಹೊಸಳ್ಳಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಗೂ ಕೋರ್ಸ್ಗಳಿಗೆ ಸಂಯೋಜನೆ ನೀಡುವ ಪ್ರಸ್ತಾವವನ್ನು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ತಿರಸ್ಕರಿಸಿದೆ. ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 173 ವಿದ್ಯಾರ್ಥಿಗಳ ಪೈಕಿ ಬಹುತೇಕರು ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ. ಬಡ ಮಕ್ಕಳಿಗೆ ಸಾಕಷ್ಟು ಅನುಕೂಲವಾಗಿದೆ. ಬೆಂಗಳೂರು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 170, ಚಾಮರಾಜನಗರ ಕಾಲೇಜಿನಲ್ಲಿ 96, ಗಂಗಾವತಿ ಕಾಲೇಜಿನಲ್ಲಿ 47 ವಿದ್ಯಾರ್ಥಿಗಳು ಇದ್ದಾರೆ. ಆದರೆ ಈ ಕಾಲೇಜುಗಳಿಗೆ ನಿಯಮ ಏಕೆ ಅನ್ವಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.