ಹಾಸನ: ವಿಧಾನ ಪರಿಷತ್ ಚುನಾವಣೆ ನಾಮಪತ್ರ ಹಿಂಪಡೆಯಲು ನಿಗದಿಪಡಿಸಿದ್ದ ಗಡುವು ಶುಕ್ರವಾರ ಕೊನೆಗೊಂಡಿದ್ದು, ಅಂತಿಮವಾಗಿ ನಾಲ್ವರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ನ ಎಂ.ಶಂಕರ್, ಬಿಜೆಪಿಯ ಎಚ್.ಎಂ.ವಿಶ್ವನಾಥ್, ಜೆಡಿಎಸ್ನ ಆರ್.ಸೂರಜ್ ಹಾಗೂ ಪಕ್ಷೇತರ ಅಭ್ಯರ್ಥಿ ಎಚ್.ಡಿ.ರೇವಣ್ಣ ಪೈಕಿ ಯಾರೊಬ್ಬರೂ ಉಮೇದುವಾರಿಕೆ ಹಿಂಪಡೆಯಲಿಲ್ಲ.
ಈ ನಾಲ್ಕೂ ಮಂದಿ ನ.23ರಂದು ನಾಮಪತ್ರ ಸಲ್ಲಿಸಿದ್ದರು. 24ರಂದು ನಾಮಪತ್ರಗಳನ್ನುಪರಿಶೀಲಿಸಿದ ಜಿಲ್ಲಾ ಚುನಾವಣಾಧಿಕಾರಿಯು ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಘೋಷಿಸಿದ್ದರು.ಉಮೇದುವಾರಿಕೆ ಹಿಂಪಡೆಯಲು ಎರಡು ದಿನ ಕಾಲಾವಕಾಶ ನೀಡಲಾಗಿತ್ತು.