ಹಾಸನ: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 467 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.
ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಇದರೊಂದಿಗೆ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 508 ತಲುಪಿದೆ. 2524 ಸಕ್ರಿಯ ಪ್ರಕರಣಗಳ ಪೈಕಿ 24 ಮಂದಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಒಟ್ಟು 30111 ಮಂದಿ ಆರೋಗ್ಯದಲ್ಲಿ ಚೇತರಿಕೆಯಾಗಿದೆ.
ಹೊಸದಾಗಿ ಆಲೂರು ತಾಲ್ಲೂಕಿನಲ್ಲಿ 25, ಅರಕಲಗೂಡು 23, ಅರಸೀಕೆರೆ 38, ಬೇಲೂರು 37, ಚನ್ನರಾಯಪಟ್ಟಣ 83, ಹಾಸನ 169, ಹೊಳೆನರಸೀಪುರ 60, ಸಕಲೇಶಪುರ 25, ಇತರೆ ಜಿಲ್ಲೆಯ ಏಳು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.