ಟ್ರಕ್ನಿಂದ ಸ್ಫೋಟಕ ಸಾಮಗ್ರಿಗಳನ್ನು ಅನ್ಲೋಡ್ ಮಾಡುವ ವೇಳೆ ಜಿಲೆಟಿನ್ ಸ್ಫೋಟಗೊಂಡು ಇಬ್ಬರು
ಮೃತಪಟ್ಟಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರ
ಕುಟುಂಬಗಳಿಗೂ ಸರ್ಕಾರ ಅಥವಾ ದುರ್ಗಾಂಬ ಎಂಟರ್ಪ್ರೈಸೆಸ್ ವತಿಯಿಂದ ಪರಿಹಾರ ನೀಡಬೇಕು. ಮನೆಗೆ
ಆಧಾರವಾಗಿದ್ದವರನ್ನು ಕಳೆದುಕೊಂಡು ಪತ್ನಿ, ಮಕ್ಕಳು ಅನಾಥರಾಗಿದ್ದಾರೆ. ಜೀವನ ನಡೆಸುವುದೇಕಷ್ಟವಾಗಿದೆ. ಸ್ಫೋಟಕ ವಸ್ತುಗಳ ಬಗ್ಗೆ ಮಾಹಿತಿ ಇಲ್ಲದೆ ಹೊಟ್ಟೆ ಪಾಡಿಗಾಗಿ ಬಂದು ಈ ಕೆಲಸ ಮಾಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.