ತಾಲ್ಲೂಕಿನ ಕಾರೆಕೆರೆ ಕೃಷಿ ಕಾಲೇಜಿನ ಆವರಣದಲ್ಲಿ ಭಾನುವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆಲುವು ಸಾಧಿಸಿದೆ. ಉತ್ತರ ಪ್ರದೇಶದಲ್ಲಿ ಆರು ತಿಂಗಳು ವಾಸ್ತವ್ಯ ಮಾಡಿ,ಪ್ರತಿ ಹಳ್ಳಿ, ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿದ್ದೇನೆ. ಇಷ್ಟು ವರ್ಷಉತ್ತರ ಪ್ರದೇಶದಲ್ಲಿ ಜಾತಿ ಮತ್ತು ಧರ್ಮದ ಆಧಾರದಲ್ಲಿ ಚುನಾವಣೆನಡೆಯುತ್ತಿತ್ತು. ಆದರೆ, ಮೊದಲ ಬಾರಿಗೆ ಅಭಿವೃದ್ಧಿ ಆಧಾರದಲ್ಲಿ ಚುನಾವಣೆನಡೆದು, ಜನರು ಬಿಜೆಪಿ ಬೆಂಬಲಿಸಿದ್ದಾರೆ’ ಎಂದು ತಿಳಿಸಿದರು.