ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಸಂದ ಗೆಲುವು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Last Updated 13 ಮಾರ್ಚ್ 2022, 15:31 IST
ಅಕ್ಷರ ಗಾತ್ರ

ಹಾಸನ: ‘ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಗೆಲ್ಲಬಹುದು ಎನ್ನುವುದಕ್ಕೆ ಈಬಾರಿಯ ಉತ್ತರ ಪ್ರದೇಶ ಚುನಾವಣೆ ಸಾಕ್ಷಿ’ ಎಂದು ಕೇಂದ್ರ ಕೃಷಿ ಮತ್ತುರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ತಾಲ್ಲೂಕಿನ ಕಾರೆಕೆರೆ ಕೃಷಿ ಕಾಲೇಜಿನ ಆವರಣದಲ್ಲಿ ಭಾನುವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆಲುವು ಸಾಧಿಸಿದೆ. ಉತ್ತರ ಪ್ರದೇಶದಲ್ಲಿ ಆರು ತಿಂಗಳು ವಾಸ್ತವ್ಯ ಮಾಡಿ,ಪ್ರತಿ ಹಳ್ಳಿ, ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿದ್ದೇನೆ. ಇಷ್ಟು ವರ್ಷಉತ್ತರ ಪ್ರದೇಶದಲ್ಲಿ ಜಾತಿ ಮತ್ತು ಧರ್ಮದ ಆಧಾರದಲ್ಲಿ ಚುನಾವಣೆನಡೆಯುತ್ತಿತ್ತು. ಆದರೆ, ಮೊದಲ ಬಾರಿಗೆ ಅಭಿವೃದ್ಧಿ ಆಧಾರದಲ್ಲಿ ಚುನಾವಣೆನಡೆದು, ಜನರು ಬಿಜೆಪಿ ಬೆಂಬಲಿಸಿದ್ದಾರೆ’ ಎಂದು ತಿಳಿಸಿದರು.

‘ಅತಿವೃಷ್ಟಿ, ಅನಾವೃಷ್ಟಿ ಸಂದರ್ಭದಲ್ಲಿ ಬೆಳೆ ಪರಿಹಾರ ರೈತರಿಗೆಅನುಕೂಲವಾಗುತ್ತದೆ. ವಿಮಾ ಕಂಪನಿ ಆಯ್ಕೆ ಮಾಡಿಕೊಳ್ಳುವ ಅಧಿಕಾರಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು. ಕಂಪನಿ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಅದನ್ನು ಕೈಬಿಟ್ಟು ಉತ್ತಮ ಕಂಪನಿಗೆ ನೀಡುವ ಅವಕಾಶರಾಜ್ಯ ಸರ್ಕಾರಕ್ಕೆ ಇದೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT