<p><strong>ಹಾಸನ: </strong>ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ಜಿಲ್ಲೆಯಲ್ಲಿ ಸೆ. 30 ರಂದು ನಡೆಸುವ ‘ಮೆಗಾ ಲೋಕ ಅದಾಲತ್' ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ತಿಳಿಸಿದರು.</p>.<p>ರಾಜಿ ಸಂಧಾನದ ಪ್ರಕರಣಗಳಿಗೆ ಶೀಘ್ರ ನ್ಯಾಯ ಪಡೆಯಲು ಲೋಕ್ ಅದಾಲತ್ ಸಹಕಾರಿಯಾಗಿದೆ. ಜಿಲ್ಲೆಯಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 78,158 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, ರಾಜಿಸಂಧಾನಕ್ಕೆ ಐದು ಸಾವಿರಕ್ಕೂ ಅಧಿಕ ಪ್ರಕರಣಗಳು ಲಭ್ಯ ಇದೆ. ಈಗಾಗಲೇ ಒಂದು ಸಾವಿರ ಪ್ರಕರಣಗಳನ್ನುಗುರುತಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಕಳೆದ ಬಾರಿ ನಡೆದ ಅದಾಲತ್ ನಲ್ಲಿ 9,900 ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿತ್ತು. ವಕೀಲರ, ಕಕ್ಷಿಗಾರರ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಸುಮಾರು 5 ಸಾವಿರಕ್ಕೂ ಹೆಚ್ಚಿನಪ್ರಕರಣಗಳನ್ನು ಇತ್ಯರ್ಥ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.</p>.<p>ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ವಿಧದ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನ, ಕೌಟುಂಬಿಕ, ಭೂಸ್ವಾಧೀನ, ಕಂದಾಯ, ಜನನಮತ್ತು ಮರಣ ನೋಂದಣಿ, ಜೀವನಾಂಶ ಹಾಗೂ ಇತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳನ್ನು ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಲುಅವಕಾಶವಿದೆ ಎಂದು ವಿವರಿಸಿದರು.</p>.<p>ಕಕ್ಷಿದಾರರು ವಕೀಲರ ಮೂಲಕ ಅಥವಾ ನೇರವಾಗಿ ರಾಜೀ ಸಂಧಾನದದಲ್ಲಿ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಇಲ್ಲಿ ರಾಜೀ ತೀರ್ಮಾನವಾಗಿರುವ ಪ್ರಕರಣಗಳ ಬಗ್ಗೆ ಮತ್ತೆ ಯಾವುದೇ ನ್ಯಾಯಾಲಯದಲ್ಲಿ ಮೇಲ್ಮನವಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ರಾಜಿ ಪ್ರಕ್ರಿಯೆಯಿಂದ ಕೋರ್ಟ್ ಸಮಯ, ಹಣ ಉಳಿಸಬಹುದಾಗಿದ್ದು, ಉಭಯ ಕಕ್ಷಿದಾರರ ನಡುವಿನಬಾಂಧವ್ಯವು ವೃದ್ಧಿಸುವುದು. ತೀರ್ಪು ತ್ವರಿತವಾಗಿ ದೊರೆಯುತ್ತದೆ ಎಂದರು.</p>.<p>ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಎಸ್ ಮಂಜುನಾಥಮೂರ್ತಿ ಮಾತನಾಡಿ, ಲೋಕ ಅದಾಲತ್ಯಶಸ್ಸಿಗೆ ವಕೀಲರು ಕೈ ಜೋಡಿಸಿದ್ದಾರೆ. ಹೆಚ್ಚು ಪ್ರಕಕರಣಗಳು ವಿಲೇವಾರಿಯಾದಷ್ಟು ಕಕ್ಷಿದಾರರುವಕೀಲರಿಗೂ ಅನುಕೂಲವಾಗುತ್ತದೆ. ಹಾಗಾಗಿ ಸಾರ್ವಜನಿಕರು ಆತಂಕವಿಲ್ಲದೆ ಈ ಅವಕಾಶವನ್ನು ಬಳಕೆಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಸಿವಿಲ್ ನ್ಯಾಯಾಧೀಶ ಬಿ.ಕೆ.ರವಿಕಾಂತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ಜಿಲ್ಲೆಯಲ್ಲಿ ಸೆ. 30 ರಂದು ನಡೆಸುವ ‘ಮೆಗಾ ಲೋಕ ಅದಾಲತ್' ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ತಿಳಿಸಿದರು.</p>.<p>ರಾಜಿ ಸಂಧಾನದ ಪ್ರಕರಣಗಳಿಗೆ ಶೀಘ್ರ ನ್ಯಾಯ ಪಡೆಯಲು ಲೋಕ್ ಅದಾಲತ್ ಸಹಕಾರಿಯಾಗಿದೆ. ಜಿಲ್ಲೆಯಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 78,158 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, ರಾಜಿಸಂಧಾನಕ್ಕೆ ಐದು ಸಾವಿರಕ್ಕೂ ಅಧಿಕ ಪ್ರಕರಣಗಳು ಲಭ್ಯ ಇದೆ. ಈಗಾಗಲೇ ಒಂದು ಸಾವಿರ ಪ್ರಕರಣಗಳನ್ನುಗುರುತಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಕಳೆದ ಬಾರಿ ನಡೆದ ಅದಾಲತ್ ನಲ್ಲಿ 9,900 ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿತ್ತು. ವಕೀಲರ, ಕಕ್ಷಿಗಾರರ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಸುಮಾರು 5 ಸಾವಿರಕ್ಕೂ ಹೆಚ್ಚಿನಪ್ರಕರಣಗಳನ್ನು ಇತ್ಯರ್ಥ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.</p>.<p>ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ವಿಧದ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನ, ಕೌಟುಂಬಿಕ, ಭೂಸ್ವಾಧೀನ, ಕಂದಾಯ, ಜನನಮತ್ತು ಮರಣ ನೋಂದಣಿ, ಜೀವನಾಂಶ ಹಾಗೂ ಇತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳನ್ನು ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಲುಅವಕಾಶವಿದೆ ಎಂದು ವಿವರಿಸಿದರು.</p>.<p>ಕಕ್ಷಿದಾರರು ವಕೀಲರ ಮೂಲಕ ಅಥವಾ ನೇರವಾಗಿ ರಾಜೀ ಸಂಧಾನದದಲ್ಲಿ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಇಲ್ಲಿ ರಾಜೀ ತೀರ್ಮಾನವಾಗಿರುವ ಪ್ರಕರಣಗಳ ಬಗ್ಗೆ ಮತ್ತೆ ಯಾವುದೇ ನ್ಯಾಯಾಲಯದಲ್ಲಿ ಮೇಲ್ಮನವಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ರಾಜಿ ಪ್ರಕ್ರಿಯೆಯಿಂದ ಕೋರ್ಟ್ ಸಮಯ, ಹಣ ಉಳಿಸಬಹುದಾಗಿದ್ದು, ಉಭಯ ಕಕ್ಷಿದಾರರ ನಡುವಿನಬಾಂಧವ್ಯವು ವೃದ್ಧಿಸುವುದು. ತೀರ್ಪು ತ್ವರಿತವಾಗಿ ದೊರೆಯುತ್ತದೆ ಎಂದರು.</p>.<p>ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಎಸ್ ಮಂಜುನಾಥಮೂರ್ತಿ ಮಾತನಾಡಿ, ಲೋಕ ಅದಾಲತ್ಯಶಸ್ಸಿಗೆ ವಕೀಲರು ಕೈ ಜೋಡಿಸಿದ್ದಾರೆ. ಹೆಚ್ಚು ಪ್ರಕಕರಣಗಳು ವಿಲೇವಾರಿಯಾದಷ್ಟು ಕಕ್ಷಿದಾರರುವಕೀಲರಿಗೂ ಅನುಕೂಲವಾಗುತ್ತದೆ. ಹಾಗಾಗಿ ಸಾರ್ವಜನಿಕರು ಆತಂಕವಿಲ್ಲದೆ ಈ ಅವಕಾಶವನ್ನು ಬಳಕೆಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಸಿವಿಲ್ ನ್ಯಾಯಾಧೀಶ ಬಿ.ಕೆ.ರವಿಕಾಂತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>