ಕೊರನಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಗುಣಮಟ್ಟದ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್ಗಳನ್ನು ಒದಗಿಸಬೇಕು. ಮಕ್ಕಳ ಮಾಸಿಕ ತಪಾಸಣೆ ಮತ್ತು ತೂಕ ಮಾಡುವಾಗ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿಸಬೇಕು. ಅಲ್ಲದೇ ನೌಕರರಿಗೆ ₹ 25 ಸಾವಿರ ಪ್ರೋತ್ಸಾಹ ಧನ ಮತ್ತು ಸ್ಥಳೀಯ ಸಾರಿಗೆ ಬಸ್ಪಾಸ್, ಊಟದ ವೆಚ್ಚವನ್ನು ಭರಿಸಬೇಕು. ಸೋಂಕು ತಗುಲಿದ ಕಾರ್ಯಕರ್ತರಿಗೆ ₹ 5 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮೀಸಲಾತಿ, ಸೇವಾ ಹಿರಿತನ ಆಧಾರದಲ್ಲಿ ಮುಂಬಡ್ತಿ ನೀಡಬೇಕು. ಸಹಾಯಕಿಯರಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ಮುಂಬಡ್ತಿ ನೀಡುವಾಗ ವಯಸ್ಸಿನ ಮಿತಿ ತೆಗೆಯಬೇಕು. ನೌಕರರನ್ನು ಕಾಯಂ ಮಾಡಬೇಕು. ಕಾಯಂ ಮಾಡುವ ತನಕ ಕಾರ್ಯಕರ್ತೆಯರಿಗೆ ₹ 30 ಸಾವಿರ ಹಾಗೂ ಸಹಾಯಕಿಯರಿಗೆ ₹ 21 ಸಾವಿರ ವೇತನ ನೀಡಬೇಕು ಎಂದು ಒತ್ತಾಯಿಸಿದರು.