ಜಿಲ್ಲಾಧಿಕಾರಿ ಈ ನಿಟ್ಟಿನಲ್ಲಿ ಆಸ್ತಕ್ತಿ ವಹಿಸಿದ್ದು, ಕೆರೆಯ ಫಲವತ್ತಾದ ಮಣ್ಣನ್ನು ರೈತರು ತಮ್ಮ ಜಮೀನುಗಳಿಗೆ ಟ್ರ್ಯಾಕ್ಟರ್ ನಲ್ಲಿ ಊಚಿತವಾಗಿ ತೆಗೆದುಕೊಂಡು ಹೋಗುತ್ತಿದ್ದಾರೆ. ಮಹೋತ್ಸವಕ್ಕೆ ಆಗಮಿಸುವ ಭಕ್ತರು, ಯಾತ್ರಿಕರಿಗೆ ತಾತ್ಕಾಲಿಕ ನಗರಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲಿಂದ ಬರುವ ತ್ಯಾಜ್ಯ ನೀರು ಸೇರಿದಂತೆ ಪಟ್ಟಣದ ಎಲ್ಲಾ ವಾರ್ಡ್ಗಳ ಒಳಚರಂಡಿ ತ್ಯಾಜ್ಯವನ್ನು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಸಂಸ್ಕರಿಸಿ ಆ ನೀರನ್ನು ರಾಚೇನಹಳ್ಳಿ ಕೆರೆಗೆ ತುಂಬಿಸುವ ಯೋಜನೆ ರೂಪಿಸಲಾಗಿದೆ.