<p><strong>ಹಾಸನ</strong>: ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಘಟಕ ಮತ್ತು ರ್ಯಾಂಡ್ಸ್ಟ್ಯಾಡ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. </p>.<p>ಉದ್ಯೋಗ ಮೇಳದಲ್ಲಿ ಎವಿಕೆ ಕಾಲೇಜಿನ ವಿದ್ಯಾರ್ಥಿನಿಯರು ಒಳಗೊಂಡಂತೆ ನಗರದ ಹಾಗೂ ವಿವಿಧ ತಾಲ್ಲೂಕಿನ ಪದವಿ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಐಟಿಐ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 900ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಮೇಳದಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಆರ್.ಟಿ. ಪ್ರತಿಮಾದೇವಿ ತಿಳಿಸಿದರು.</p>.<p>ಪದವಿ ಮುಗಿಸಿದ ವಿದ್ಯಾರ್ಥಿಗಳು ತಕ್ಷಣವೇ ಹಾಗೂ ಅಂತಿಮ ಪದವಿಯಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ತಕ್ಷಣವೇ ಆಯ್ಕೆ ಪತ್ರವನ್ನು ಪಡೆದು ಕೆಲಸಕ್ಕೆ ಹಾಜರಾಗಬಹುದು ಎಂದು ಕಂಪನಿಯು ಅಧಿಕಾರಿಗಳು ತಿಳಿಸಿದರು.</p>.<p>ಕಾಲೇಜಿನ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ಸಂಚಾಲಕ ಡಾ.ಕೆ.ಎಸ್.ಕುನಾಲ್ ಮಾರ್ಗದರ್ಶನ ಹಾಗೂ ಬೆಂಗಳೂರಿನ ರ್ಯಾಂಡ್ಸ್ಟ್ಯಾಡ್ ಕಂಪನಿಯ ಡೆಲಿವೆರಿ ಮ್ಯಾನೇಜರ್ ಕೃಷ್ಣಮೂರ್ತಿ ಎನ್. ಹಾಗೂ ತಂಡದ ನೇತೃತ್ವದಲ್ಲಿ ಉದ್ಯೋಗ ಮೇಳ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಘಟಕ ಮತ್ತು ರ್ಯಾಂಡ್ಸ್ಟ್ಯಾಡ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. </p>.<p>ಉದ್ಯೋಗ ಮೇಳದಲ್ಲಿ ಎವಿಕೆ ಕಾಲೇಜಿನ ವಿದ್ಯಾರ್ಥಿನಿಯರು ಒಳಗೊಂಡಂತೆ ನಗರದ ಹಾಗೂ ವಿವಿಧ ತಾಲ್ಲೂಕಿನ ಪದವಿ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಐಟಿಐ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 900ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಮೇಳದಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಆರ್.ಟಿ. ಪ್ರತಿಮಾದೇವಿ ತಿಳಿಸಿದರು.</p>.<p>ಪದವಿ ಮುಗಿಸಿದ ವಿದ್ಯಾರ್ಥಿಗಳು ತಕ್ಷಣವೇ ಹಾಗೂ ಅಂತಿಮ ಪದವಿಯಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ತಕ್ಷಣವೇ ಆಯ್ಕೆ ಪತ್ರವನ್ನು ಪಡೆದು ಕೆಲಸಕ್ಕೆ ಹಾಜರಾಗಬಹುದು ಎಂದು ಕಂಪನಿಯು ಅಧಿಕಾರಿಗಳು ತಿಳಿಸಿದರು.</p>.<p>ಕಾಲೇಜಿನ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ಸಂಚಾಲಕ ಡಾ.ಕೆ.ಎಸ್.ಕುನಾಲ್ ಮಾರ್ಗದರ್ಶನ ಹಾಗೂ ಬೆಂಗಳೂರಿನ ರ್ಯಾಂಡ್ಸ್ಟ್ಯಾಡ್ ಕಂಪನಿಯ ಡೆಲಿವೆರಿ ಮ್ಯಾನೇಜರ್ ಕೃಷ್ಣಮೂರ್ತಿ ಎನ್. ಹಾಗೂ ತಂಡದ ನೇತೃತ್ವದಲ್ಲಿ ಉದ್ಯೋಗ ಮೇಳ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>