ಕಾರ್ಖಾನೆಯಲ್ಲಿ ವೇತನ ಸಮಸ್ಯೆ ಇದೆ ಎಂಬ ದೂರಿಗೆ ಸಂಬಂಧಿಸಿದಂತೆ ಕಾರ್ಮಿಕ ಮತ್ತು ಕೈಗಾರಿಕೆ ಇಲಾಖೆಗಳ ಅಧಿಕಾರಿಗಳು ಪರಿಶೀಲಿಸಿದ್ದು, ಆ ರೀತಿಯ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಕೆಲ ಕಾರ್ಮಿಕರಿಗೆ ಎಚ್.ಆರ್. ವಿಭಾಗದ ಕೆಲವರಿಂದ ತೊಂದರೆಯಾಗಿದೆ ಎಂಬ ಮಾಹಿತಿ ಇದೆ. ಇದನ್ನು ಮನಗಂಡು ಪೊಲೀಸರು, ಜಿಲ್ಲಾಡಳಿತ, ಕೈಗಾರಿಕೆ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಕರೆಸಿ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಪಾಷಾ ಹೇಳಿದರು.