<p><strong>ಹಾಸನ: </strong>ಜಿಲ್ಲೆಯಲ್ಲಿ ₹ 86 ಕೋಟಿ ವೆಚ್ಚದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸಚಿವ ಎಚ್.ಡಿ.ರೇವಣ್ಣ ಸೂಚನೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಯಾವುದೇ ಗ್ರಾಮವೂ ನೀರಿನ ಬವಣೆ ಎದುರಿಸದಂತೆ ನಿಗಾವಹಿಸಿ ಕ್ರಿಯಾ ಯೋಜನೆ ಸಿದ್ದಪಡಿಸಲು ನಿರ್ದೇಶನ ನೀಡಿದರು.</p>.<p>ಜಿಲ್ಲೆಯಲ್ಲಿ ಸಾಕಷ್ಟು ನದಿಗಳು, ಹಳ್ಳಗಳು ಹರಿಯುತ್ತವೆ. ಮಲೆನಾಡಿನಲ್ಲಿ ನೀರು ಸಿಗುತ್ತಿದ್ದು, ಅವುಗಳೆಲ್ಲದರ ಸದ್ಬಳಕೆಯಾಗಬೇಕು. ಪ್ರತಿ ಹಳ್ಳಿಗಳಿಗೂ ನಲ್ಲಿ ನೀರು ಪೂರೈಕೆಯಾಗಬೇಕು. ಜಲಧಾರೆ ಯೋಜನೆಯೂ ವ್ಯಾಪಕವಾಗಿ ಅನುಷ್ಠಾನವಾಗಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆನಂದ್ ಮಾತನಾಡಿ, ಈ ಹಿಂದೆ ₹ 164 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ₹119 ಕೋಟಿ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಸದ್ಬಳಕೆಯಾಗಿದೆ. ಉಳಿದ ₹ 35 ಕೋಟಿಯಲ್ಲಿ ವಿದ್ಯುಚ್ಚಕ್ತಿ ಬಿಲ್ಗೆ ₹16 ಕೋಟಿ ಹಾಗೂ ಮುಂದುವರೆದ ಕಾಮಗಾರಿಗೆ ₹ 7 ಕೋಟಿ ಪಾವತಿಸಬೇಕಾಗಿದ್ದು, ₹ 12 ಕೋಟಿಗೆ ಹೊಸ ಕೆಲಸಗಳು ಲಭ್ಯವಿದೆ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಮತ್ತು ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ, ವಿದ್ಯುತ್ ಬಿಲ್ಗೆ ಶೇಕಡಾ 50 ರಷ್ಟು ಪಾವತಿಸಿ ಉಳಿದ ಹಣವನ್ನು ಕುಡಿಯುವ ನೀರಿನ ಕಾಮಗಾರಿಗೆ ಬಳಸಬೇಕು ಇದರಿಂದ ಒಟ್ಟಾರೆ ₹ 20 ಕೋಟಿ ವೆಚ್ಚದಲ್ಲಿ ಹೊಸ ಯೋಜನೆಗೆ ಲಭ್ಯವಾಗಲಿದೆ ಎಂದು ಒತ್ತಾಯಿಸಿದರು.</p>.<p>ರೇವಣ್ಣ ಮಾತನಾಡಿ, ಲಭ್ಯ ಹಣಕ್ಕೆ ಪೂರಕವಾಗಿ ರೂಪಿಸಿದ ಯೋಜನೆಗಳಿಗೆ ಅನುಮೋದನೆ ನೀಡಲಾಗುವುದು. ಅಲ್ಲದೇ ಈ ಹಿಂದೆ ತೀವ್ರ ಬರ ಹಿನ್ನಲೆಯಲ್ಲಿ ತಮ್ಮ ಕೋರಿಕೆ ಮೇರೆಗೆ ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಜಿಲ್ಲೆಯಾದ್ಯಂತ ಸಂಚಾರಿ ₹ 35 ಕೋಟಿ ಅಂದಾಜು ವೆಚ್ಚದ ಕ್ರಿಯಾ ಯೋಜನೆ ತಯಾರಿಸಿದ್ದರು. ಅವೆಲ್ಲವೂ ಸೇರಿದಂತೆ ₹ 86 ಕೋಟಿ ವಿಸ್ತೃತ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸೂಚನೆ ನೀಡಿದರು.</p>.<p>ಆಲೂರು ತಾಲ್ಲೂಕಿಗೆ ಗೊರೂರು ಮತ್ತು ಯಗಚಿ ಜಲಾಶಗಳಿಂದ ನೀರು ಪೂರೈಸುವ ಯೋಜನೆ ರೂಪಿಸುವಂತೆ ಸಚಿವರು ಹೇಳಿದರು.</p>.<p>ಎಚ್.ಕೆ.ಕುಮಾರಸ್ವಾಮಿ ಅವರು ಕ್ಷೇತ್ರದ ನೀರಾವರಿ ಸಮಸ್ಯೆ ಹಾಗೂ ಅತಿವೃಷ್ಟಿಬಾಧಿತ ಹಿಜ್ಜನಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಪ್ರಸ್ತಾಪಿಸಿದರು.</p>.<p>ಶಿವಲಿಂಗೇಗೌಡರು ಕ್ಷೇತ್ರದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಲು ಒತ್ತಾಯಿಸಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಲ್ಲಾ ಪಂಚಾಯಿತಿ ಪ್ರಭಾರ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ.ಎಲ್. ವೈಶಾಲಿ, ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ₹ 86 ಕೋಟಿ ವೆಚ್ಚದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸಚಿವ ಎಚ್.ಡಿ.ರೇವಣ್ಣ ಸೂಚನೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಯಾವುದೇ ಗ್ರಾಮವೂ ನೀರಿನ ಬವಣೆ ಎದುರಿಸದಂತೆ ನಿಗಾವಹಿಸಿ ಕ್ರಿಯಾ ಯೋಜನೆ ಸಿದ್ದಪಡಿಸಲು ನಿರ್ದೇಶನ ನೀಡಿದರು.</p>.<p>ಜಿಲ್ಲೆಯಲ್ಲಿ ಸಾಕಷ್ಟು ನದಿಗಳು, ಹಳ್ಳಗಳು ಹರಿಯುತ್ತವೆ. ಮಲೆನಾಡಿನಲ್ಲಿ ನೀರು ಸಿಗುತ್ತಿದ್ದು, ಅವುಗಳೆಲ್ಲದರ ಸದ್ಬಳಕೆಯಾಗಬೇಕು. ಪ್ರತಿ ಹಳ್ಳಿಗಳಿಗೂ ನಲ್ಲಿ ನೀರು ಪೂರೈಕೆಯಾಗಬೇಕು. ಜಲಧಾರೆ ಯೋಜನೆಯೂ ವ್ಯಾಪಕವಾಗಿ ಅನುಷ್ಠಾನವಾಗಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆನಂದ್ ಮಾತನಾಡಿ, ಈ ಹಿಂದೆ ₹ 164 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ₹119 ಕೋಟಿ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಸದ್ಬಳಕೆಯಾಗಿದೆ. ಉಳಿದ ₹ 35 ಕೋಟಿಯಲ್ಲಿ ವಿದ್ಯುಚ್ಚಕ್ತಿ ಬಿಲ್ಗೆ ₹16 ಕೋಟಿ ಹಾಗೂ ಮುಂದುವರೆದ ಕಾಮಗಾರಿಗೆ ₹ 7 ಕೋಟಿ ಪಾವತಿಸಬೇಕಾಗಿದ್ದು, ₹ 12 ಕೋಟಿಗೆ ಹೊಸ ಕೆಲಸಗಳು ಲಭ್ಯವಿದೆ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಮತ್ತು ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ, ವಿದ್ಯುತ್ ಬಿಲ್ಗೆ ಶೇಕಡಾ 50 ರಷ್ಟು ಪಾವತಿಸಿ ಉಳಿದ ಹಣವನ್ನು ಕುಡಿಯುವ ನೀರಿನ ಕಾಮಗಾರಿಗೆ ಬಳಸಬೇಕು ಇದರಿಂದ ಒಟ್ಟಾರೆ ₹ 20 ಕೋಟಿ ವೆಚ್ಚದಲ್ಲಿ ಹೊಸ ಯೋಜನೆಗೆ ಲಭ್ಯವಾಗಲಿದೆ ಎಂದು ಒತ್ತಾಯಿಸಿದರು.</p>.<p>ರೇವಣ್ಣ ಮಾತನಾಡಿ, ಲಭ್ಯ ಹಣಕ್ಕೆ ಪೂರಕವಾಗಿ ರೂಪಿಸಿದ ಯೋಜನೆಗಳಿಗೆ ಅನುಮೋದನೆ ನೀಡಲಾಗುವುದು. ಅಲ್ಲದೇ ಈ ಹಿಂದೆ ತೀವ್ರ ಬರ ಹಿನ್ನಲೆಯಲ್ಲಿ ತಮ್ಮ ಕೋರಿಕೆ ಮೇರೆಗೆ ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಜಿಲ್ಲೆಯಾದ್ಯಂತ ಸಂಚಾರಿ ₹ 35 ಕೋಟಿ ಅಂದಾಜು ವೆಚ್ಚದ ಕ್ರಿಯಾ ಯೋಜನೆ ತಯಾರಿಸಿದ್ದರು. ಅವೆಲ್ಲವೂ ಸೇರಿದಂತೆ ₹ 86 ಕೋಟಿ ವಿಸ್ತೃತ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸೂಚನೆ ನೀಡಿದರು.</p>.<p>ಆಲೂರು ತಾಲ್ಲೂಕಿಗೆ ಗೊರೂರು ಮತ್ತು ಯಗಚಿ ಜಲಾಶಗಳಿಂದ ನೀರು ಪೂರೈಸುವ ಯೋಜನೆ ರೂಪಿಸುವಂತೆ ಸಚಿವರು ಹೇಳಿದರು.</p>.<p>ಎಚ್.ಕೆ.ಕುಮಾರಸ್ವಾಮಿ ಅವರು ಕ್ಷೇತ್ರದ ನೀರಾವರಿ ಸಮಸ್ಯೆ ಹಾಗೂ ಅತಿವೃಷ್ಟಿಬಾಧಿತ ಹಿಜ್ಜನಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಪ್ರಸ್ತಾಪಿಸಿದರು.</p>.<p>ಶಿವಲಿಂಗೇಗೌಡರು ಕ್ಷೇತ್ರದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಲು ಒತ್ತಾಯಿಸಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಲ್ಲಾ ಪಂಚಾಯಿತಿ ಪ್ರಭಾರ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ.ಎಲ್. ವೈಶಾಲಿ, ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>