ನಗರದಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಸ್ಥಳೀಯ ರೈತ ಮುಖಂಡರು ಮತ್ತು ಸುತ್ತಲಿನ ಗ್ರಾಮಸ್ಥರು ನೀಡಿದ ಮಾಹಿತಿ ಆಧರಿಸಿ, ಹಾಸನ ಸಹಾಯಕ ಕೃಷಿ ನಿರ್ದೇಶಕ ಜಾರಿ ದಳದ ಶಿವಕುಮಾರ್ ಹಾಗೂ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ ಮಂಜುನಾಥ್ ಮತ್ತು ತಂಡದಿಂದ, ಪೊಲೀಸರೊಂದಿಗೆ ಸ್ಥಳಕ್ಕೆ ಹೋಗಿ ನೋಡಿದಾಗ ಅಕ್ರಮ ದಾಸ್ತಾನು ಪತ್ತೆಯಾಗಿದೆ’ ಎಂದು ಹೇಳಿದರು.