ಚಿಕ್ಕಮಗಳೂರು ತಾಲ್ಲೂಕಿನ ಬಸವನಗುಡಿ ನಿವಾಸಿಗಳಾದ ವೆಂಕಟೇಶ್ –ಜ್ಯೋತಿ ದಂಪತಿಯ ಒಂದೂವರೆ ವರ್ಷದ ಮಗು ವಿಜಯ್, ಮಂಗಳವಾರ ಮನೆಯಲ್ಲಿ ಆಟವಾಡುವ ಸಂದರ್ಭದಲ್ಲಿ ಮೆಟ್ಟಿಲಿನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಮಗುವನ್ನು ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದರು.