ವಿವಿಧ ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಾದ್ಯಗೋಷ್ಠಿಗಳೊಂದಿಗೆ ಸಾಗಿದ ಗಣಪತಿ ಉತ್ಸವ ನಗರದ ಆರ್ಆರ್ ರಸ್ತೆ, ಸಂತೆಪೇಟೆ, ಶಿವಾಲಯ, ಪೇಟೆಬೀದಿ, ಹಾಸನ ರಸ್ತೆ, ಮಾರ್ಕೆಟ್ ಚೌಕ, ಪಿಪಿ ಸರ್ಕಲ್, ರೈಲ್ವೆ ನಿಲ್ದಾಣ ರಸ್ತೆ, ಆರ್ಎಂಎಸ್ ರಸ್ತೆ, ಮೊದಲಿಯಾರ್ ಬೀದಿ, ಎಪಿಎಂಸಿ ಮಾರುಕಟ್ಟೆ, ಗ್ರಂಥಾಲಯ ರಸ್ತೆ, ಯಜಮಾನ ರಂಗೇಗೌಡರ ಬೀದಿ, ಶ್ಯಾನುಭೋಗರ ಬೀದಿ, ಕರಿಯಮ್ಮ ದೇವಾಲಯದ ರಸ್ತೆ, ಗರುಡನಗಿರಿ ರಸ್ತೆ, ಸಂತೆಮೈದಾನ, ಸಾಯಿನಾಥ ರಸ್ತೆ, ಹರಿಜನ ಕಾಲೊನಿ, ಸುಭಾಷ್ ನಗರ, ನಿರಂಜನ ಸರ್ಕಲ್, ಲಕ್ಷ್ಮಿಪುರ, ಮಿನಿವಿಧಾನ ಸೌಧ, ಬಿ.ಎಚ್. ರಸ್ತೆಯ ಮೂಲಕ ಸಾಗಿ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ನಗರದ ಕಂತೇನಹಳ್ಳಿ ಕೆರೆಯಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಸರ್ಜನಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.