<p><strong>ಕೊಣನೂರು</strong>: ಅರಕಲಗೂಡು ತಾಲ್ಲೂಕಿಗೆ ಕೈಗಾರಿಕಾ ಪ್ರದೇಶವನ್ನು ತರುವ ಮೂಲಕ ಇಲ್ಲಿನ ವಿದ್ಯಾವಂತ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವುದು ನನ್ನ ಗುರಿಯಾಗಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಪಿ. ಶ್ರೀಧರ್ ಗೌಡ ತಿಳಿಸಿದರು.</p>.<p>ಕೊಣನೂರಿನ ಚರ್ಚ್ನಲ್ಲಿ 2026ರ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅರಕಲಗೂಡು ತಾಲ್ಲೂಕಿನಲ್ಲಿ ಶೇ 99.74 ಗುರಿ ಸಾಧಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ₹ 270 ಕೋಟಿ, ಅನ್ನಭಾಗ್ಯದಲ್ಲಿ ₹ 89 ಕೋಟಿ, ಶಕ್ತಿ ಯೋಜನೆಯಡಿ ₹121 ಕೋಟಿ, ಗೃಹಜ್ಯೋತಿ ಅಡಿ ₹ 41 ಕೋಟಿ ಮತ್ತು ಯುವ ನಿಧಿ ಯೋಜನೆಯಡಿ 700 ಯುವಕರಿಗೆ ₹ 3 ಕೋಟಿ ದೊರೆತಿದೆ’ ಎಂದರು.</p>.<p>‘ಹಳ್ಳಿಮೈಸೂರನ್ನು ತಾಲ್ಲೂಕು ಕೇಂದ್ರವನ್ನಾಗಿಸುವುದು, ರಂಗೇನಹಳ್ಳಿ ಮತ್ತು ಗುಡ್ಡೇನಹಳ್ಳಿ ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತಂದು, ಈ ಭಾಗದ ರೈತರ ಕೃಷಿ ಬದುಕನ್ನು ಆದಾಯದತ್ತ ಕೊಂಡೊಯ್ಯುವುದು’ ನನ್ನ ಆಶಯ ಎಂದರು.</p>.<p>ಕೊಣನೂರು ಮತ್ತು ರಾಮನಾಥಪುರ ಭಾಗದಲ್ಲಿ ನೀರಾವರಿ ಸೌಲಭ್ಯವಿದ್ದು, ಸಕ್ಕರೆ ಕಾರ್ಖಾನೆ ಆರಂಭಿಸಲು ಹೆಚ್ಚಿನ ಅವಕಾಶಗಳಿವೆ. ಶುಂಠಿ, ತಂಬಾಕು ಬೆಳೆಗಳ ಜೊತೆಗೆ ಕಬ್ಬು ಆರ್ಥಿಕ ಬೆಳೆಯನ್ನಾಗಿಸುವ ಸಾಧ್ಯತೆಯಿದ್ದು, ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆಯೊಂದು ಪ್ರಾರಂಭವಾಗುವಂತೆ ಮಾಡಿ, ರೈತರ ಸಹಕಾರಕ್ಕೆ ನಿಲ್ಲುವುದರ ಜೊತೆಗೆ ಈ ಭಾಗದ ಅನೇಕರಿಗೆ ಉದ್ಯೋಗ ಒದಗಿಸುವುದು ನನ್ನ ಆಲೋಚನೆಯಾಗಿದೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಿಗೆರೆ ಸೊಮಶೇಖರ್, ಕೃಷಿ ಪತ್ತಿನ ಸಂಘದ ನಿರ್ದೇಶಕ ಪ್ರವೀಣ್, ಮುಖಂಡ ಶಹಾಬಾಜ್, ಸ್ಥಳೀಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು</strong>: ಅರಕಲಗೂಡು ತಾಲ್ಲೂಕಿಗೆ ಕೈಗಾರಿಕಾ ಪ್ರದೇಶವನ್ನು ತರುವ ಮೂಲಕ ಇಲ್ಲಿನ ವಿದ್ಯಾವಂತ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವುದು ನನ್ನ ಗುರಿಯಾಗಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಪಿ. ಶ್ರೀಧರ್ ಗೌಡ ತಿಳಿಸಿದರು.</p>.<p>ಕೊಣನೂರಿನ ಚರ್ಚ್ನಲ್ಲಿ 2026ರ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅರಕಲಗೂಡು ತಾಲ್ಲೂಕಿನಲ್ಲಿ ಶೇ 99.74 ಗುರಿ ಸಾಧಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ₹ 270 ಕೋಟಿ, ಅನ್ನಭಾಗ್ಯದಲ್ಲಿ ₹ 89 ಕೋಟಿ, ಶಕ್ತಿ ಯೋಜನೆಯಡಿ ₹121 ಕೋಟಿ, ಗೃಹಜ್ಯೋತಿ ಅಡಿ ₹ 41 ಕೋಟಿ ಮತ್ತು ಯುವ ನಿಧಿ ಯೋಜನೆಯಡಿ 700 ಯುವಕರಿಗೆ ₹ 3 ಕೋಟಿ ದೊರೆತಿದೆ’ ಎಂದರು.</p>.<p>‘ಹಳ್ಳಿಮೈಸೂರನ್ನು ತಾಲ್ಲೂಕು ಕೇಂದ್ರವನ್ನಾಗಿಸುವುದು, ರಂಗೇನಹಳ್ಳಿ ಮತ್ತು ಗುಡ್ಡೇನಹಳ್ಳಿ ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತಂದು, ಈ ಭಾಗದ ರೈತರ ಕೃಷಿ ಬದುಕನ್ನು ಆದಾಯದತ್ತ ಕೊಂಡೊಯ್ಯುವುದು’ ನನ್ನ ಆಶಯ ಎಂದರು.</p>.<p>ಕೊಣನೂರು ಮತ್ತು ರಾಮನಾಥಪುರ ಭಾಗದಲ್ಲಿ ನೀರಾವರಿ ಸೌಲಭ್ಯವಿದ್ದು, ಸಕ್ಕರೆ ಕಾರ್ಖಾನೆ ಆರಂಭಿಸಲು ಹೆಚ್ಚಿನ ಅವಕಾಶಗಳಿವೆ. ಶುಂಠಿ, ತಂಬಾಕು ಬೆಳೆಗಳ ಜೊತೆಗೆ ಕಬ್ಬು ಆರ್ಥಿಕ ಬೆಳೆಯನ್ನಾಗಿಸುವ ಸಾಧ್ಯತೆಯಿದ್ದು, ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆಯೊಂದು ಪ್ರಾರಂಭವಾಗುವಂತೆ ಮಾಡಿ, ರೈತರ ಸಹಕಾರಕ್ಕೆ ನಿಲ್ಲುವುದರ ಜೊತೆಗೆ ಈ ಭಾಗದ ಅನೇಕರಿಗೆ ಉದ್ಯೋಗ ಒದಗಿಸುವುದು ನನ್ನ ಆಲೋಚನೆಯಾಗಿದೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಿಗೆರೆ ಸೊಮಶೇಖರ್, ಕೃಷಿ ಪತ್ತಿನ ಸಂಘದ ನಿರ್ದೇಶಕ ಪ್ರವೀಣ್, ಮುಖಂಡ ಶಹಾಬಾಜ್, ಸ್ಥಳೀಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>