ಚನ್ನರಾಯಪಟ್ಟಣ ತಾಲ್ಲೂಕಿನ ಬೆಳಗುಲಿ ಗ್ರಾಮದ ಸುರೇಶ್–ಮಮತಾ ದಂಪತಿಯ ಏಕೈಕ ಪುತ್ರ ವಿಕಾಸ್, ದ್ವಿತೀಯ ಪಿಯುಸಿ ಓದುತ್ತಿದ್ದ. ಗುರುವಾರ ಬೆಳಿಗ್ಗೆ 8.30ಕ್ಕೆ ತರಗತಿಗೆ ತೆರಳಿದ್ದ ಆತ, 10 ಗಂಟೆ ವೇಳೆಗೆ ಕಾಲೇಜು ಪಕ್ಕದ ಕನ್ವೆನ್ಷನ್ ಹಾಲ್ನಲ್ಲಿರುವ ಹಾಸ್ಟೆಲ್ ಕೊಠಡಿಗೆ ಮರಳಿದ್ದ. ನಂತರ ಈ ಘಟನೆ ನಡೆದಿದ್ದು, ‘ಆತನ ಸಾವಿಗೆ ವಾರ್ಡನ್ ಕಾರಣ’ ಎಂದು ಸಂಬಂಧಿಕರು ಆರೋಪಿಸಿದ್ದಾರೆ