‘ಶಾಸಕರ ಸಹೋದರರಾದ ವೇದಮೂರ್ತಿ, ಶ್ರೀನಾಥ್ ಸೇರಿದಂತೆ ಇತರರು ಬಿಸಲಹಳ್ಳಿಯಲ್ಲಿ ಸರ್ವೆ 91, 92, 93, 78 ರಲ್ಲಿ ಅಂದಾಜು 70–80 ಎಕರೆ ಒತ್ತುವರಿ ಮಾಡಿದ್ದಾರೆ. ಜಮೀನು ಕಳೆದುಕೊಂಡವನ ಒಕ್ಕಲೆಬ್ಬಿಸುವುದರಲ್ಲಿ ಅರ್ಥವಿಲ್ಲ. ತಮ್ಮ ಪಕ್ಕದ ಜಮೀನಿನ ವಾಸೀಂ ಎಂಬವರಿಗೆ ಖರಾಬ್ ಜಾಗವಿದ್ದರೂ ರಸ್ತೆ ನೀಡುತ್ತಿಲ್ಲ. ರಾಮಸ್ವಾಮಿ ಅವರು ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ತಮ್ಮ ಮನೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿಸಿಕೊಂಡಿದ್ದಾರೆ. ವಾಸೀಂ ಎಂಬವರು ಜಮೀನಿಗೆ ಹೋಗದಂತೆ ಸುತ್ತಲೂ ಬೇಲಿ ಹಾಕಿಕೊಂಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.