<p>ಆಲೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಬದಿ ಕೆಲವರು ಕಸ ಎಸೆಯುತ್ತಿದ್ದುದನ್ನು ಗಮನಿಸಿದ ಮುಖ್ಯಾಧಿಕಾರಿ ಹಾಗೂ ತಂಡದವರು, ಕಸವಿದ್ದ ಸ್ಥಳವನ್ನು ಶುಚಿಗೊಳಿಸಿ, ಆ ಸ್ಥಳದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದು ಸಾರ್ವಜನಿಕರಲ್ಲಿ ತಿಳಿವಳಿಕೆಯ ಜೊತೆಗೆ ಎಚ್ಚರಿಕೆಯನ್ನೂ ನೀಡುತ್ತಿದೆ ಎಂದು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.</p>.<p>ನಿತ್ಯ ಪ್ರತಿ ಮನೆ ಬಳಿಗೆ ಕಸದ ವಾಹನ ಬರುತ್ತದೆ. ಅದರಲ್ಲಿ ಹಸಿ ಮತ್ತು ಒಣ ಕಸವೆಂದು ವಿಂಗಡಿಸಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ತೆಗೆದುಕೊಂಡು ಹೋಗುತ್ತಿದ್ದು, ನಿಗದಿಪಡಿಸಿರುವ ಕಾಂಪೋಸ್ಟ್ ಗುಂಡಿಗೆ ಹಾಕಿ ಗೊಬ್ಬರ ತಯಾರಿಸುತ್ತಾರೆ.</p>.<p>ಆದರೆ ಬಹುತೇಕ ವಿದ್ಯಾವಂತ ನಾಗರೀಕರು, ತಮ್ಮ ಮನೆ ಬಳಿಗೆ ಕಸದ ವಾಹನ ಬಂದಾಗ ಕಸ ಕೊಡಲು ಸಾಧ್ಯವಾಗದೇ, ತಾವು ಶಾಲೆ, ಕಾಲೇಜು, ಕಚೇರಿಗೆ ಹೋಗುವ ಸಂದರ್ಭದಲ್ಲಿ ರಸ್ತೆಯಂಚಿನಲ್ಲಿ ಬಿಸಾಡಿ ಹೋಗುತ್ತಾರೆ.</p>.<p>ಅಲ್ಲಲ್ಲಿ ಬಿಸಾಡಿದ ಕಸವನ್ನು ಸಂಗ್ರಹಿಸುತ್ತಿದ್ದ ಪಂಚಾಯಿತಿ ಸಿಬ್ಬಂದಿ, ಇಲ್ಲಿ ಕಸ ಹಾಕಿದರೆ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂಬ ನಾಮಫಲಕ ಹಾಕಿದರೂ ಪ್ರಯೋಜನ ಆಗುತ್ತಿಲ್ಲ. ಇದರಿಂದ ಕಸ ವಿಲೇವಾರಿ ಸಮಸ್ಯೆ ಉಲ್ಬಣಿಸುತ್ತಿದೆ ಎನ್ನುವುದು ಪುರಸಭೆ ಸಿಬ್ಬಂದಿಯ ಮಾತು.</p>.<p>ಇದನ್ನರಿತ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್, ತಮ್ಮ ತಂಡದೊಂದಿಗೆ ಕಸ ವಿಲೇವಾರಿ ಮಾಡಿ, ಆ ಸ್ಥಳದಲ್ಲಿ ಗಿಡಗಳನ್ನು ನೆಡಲು ಮುಂದಾಗಿದ್ದಾರೆ. ಭವಿಷ್ಯ ಅರಿಯದ ಅನಾಗರಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಇಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>Quote - ಅಲ್ಲಲ್ಲಿ ಕಸ ಎಸೆಯುತ್ತಿದ್ದ ಸ್ಥಳ ಶುಚಿಗೊಳಿಸಿ ಆ ಸ್ಥಳದಲ್ಲಿ ಗಿಡಗಳನ್ನು ನೆಡುತ್ತಿದ್ದೇವೆ. ಗೌಪ್ಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಕಸ ಬಿಸಾಡಿದವರನ್ನು ಗುರುತಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಮಂಜುನಾಥ್ ಪ.ಪಂ. ಮುಖ್ಯಾಧಿಕಾರಿ</p>.<p>Quote - ಬಹುತೇಕ ವಿದ್ಯಾವಂತರೆ ರಸ್ತೆಗಳಲ್ಲಿ ಕಸ ಬಿಸಾಡುತ್ತಿದ್ದಾರೆ. ಪಟ್ಟಣ ಪಂಚಾಯಿತಿ ಗಿಡಗಳನ್ನು ನೆಡುತ್ತಿರುವುದು ಶುಚಿತ್ವಕ್ಕೆ ಉತ್ತಮ ಸಂಕೇತ. ಇದಕ್ಕೆ ನಾಗರಿಕರು ಸ್ಪಂದಿಸಬೇಕು. ಕಸ ಬಿಸಾಡಿದವರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು. ಬಿ. ಮಂಜೇಗೌಡ ಆಲೂರು ನಿವಾಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಬದಿ ಕೆಲವರು ಕಸ ಎಸೆಯುತ್ತಿದ್ದುದನ್ನು ಗಮನಿಸಿದ ಮುಖ್ಯಾಧಿಕಾರಿ ಹಾಗೂ ತಂಡದವರು, ಕಸವಿದ್ದ ಸ್ಥಳವನ್ನು ಶುಚಿಗೊಳಿಸಿ, ಆ ಸ್ಥಳದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದು ಸಾರ್ವಜನಿಕರಲ್ಲಿ ತಿಳಿವಳಿಕೆಯ ಜೊತೆಗೆ ಎಚ್ಚರಿಕೆಯನ್ನೂ ನೀಡುತ್ತಿದೆ ಎಂದು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.</p>.<p>ನಿತ್ಯ ಪ್ರತಿ ಮನೆ ಬಳಿಗೆ ಕಸದ ವಾಹನ ಬರುತ್ತದೆ. ಅದರಲ್ಲಿ ಹಸಿ ಮತ್ತು ಒಣ ಕಸವೆಂದು ವಿಂಗಡಿಸಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ತೆಗೆದುಕೊಂಡು ಹೋಗುತ್ತಿದ್ದು, ನಿಗದಿಪಡಿಸಿರುವ ಕಾಂಪೋಸ್ಟ್ ಗುಂಡಿಗೆ ಹಾಕಿ ಗೊಬ್ಬರ ತಯಾರಿಸುತ್ತಾರೆ.</p>.<p>ಆದರೆ ಬಹುತೇಕ ವಿದ್ಯಾವಂತ ನಾಗರೀಕರು, ತಮ್ಮ ಮನೆ ಬಳಿಗೆ ಕಸದ ವಾಹನ ಬಂದಾಗ ಕಸ ಕೊಡಲು ಸಾಧ್ಯವಾಗದೇ, ತಾವು ಶಾಲೆ, ಕಾಲೇಜು, ಕಚೇರಿಗೆ ಹೋಗುವ ಸಂದರ್ಭದಲ್ಲಿ ರಸ್ತೆಯಂಚಿನಲ್ಲಿ ಬಿಸಾಡಿ ಹೋಗುತ್ತಾರೆ.</p>.<p>ಅಲ್ಲಲ್ಲಿ ಬಿಸಾಡಿದ ಕಸವನ್ನು ಸಂಗ್ರಹಿಸುತ್ತಿದ್ದ ಪಂಚಾಯಿತಿ ಸಿಬ್ಬಂದಿ, ಇಲ್ಲಿ ಕಸ ಹಾಕಿದರೆ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂಬ ನಾಮಫಲಕ ಹಾಕಿದರೂ ಪ್ರಯೋಜನ ಆಗುತ್ತಿಲ್ಲ. ಇದರಿಂದ ಕಸ ವಿಲೇವಾರಿ ಸಮಸ್ಯೆ ಉಲ್ಬಣಿಸುತ್ತಿದೆ ಎನ್ನುವುದು ಪುರಸಭೆ ಸಿಬ್ಬಂದಿಯ ಮಾತು.</p>.<p>ಇದನ್ನರಿತ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್, ತಮ್ಮ ತಂಡದೊಂದಿಗೆ ಕಸ ವಿಲೇವಾರಿ ಮಾಡಿ, ಆ ಸ್ಥಳದಲ್ಲಿ ಗಿಡಗಳನ್ನು ನೆಡಲು ಮುಂದಾಗಿದ್ದಾರೆ. ಭವಿಷ್ಯ ಅರಿಯದ ಅನಾಗರಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಇಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>Quote - ಅಲ್ಲಲ್ಲಿ ಕಸ ಎಸೆಯುತ್ತಿದ್ದ ಸ್ಥಳ ಶುಚಿಗೊಳಿಸಿ ಆ ಸ್ಥಳದಲ್ಲಿ ಗಿಡಗಳನ್ನು ನೆಡುತ್ತಿದ್ದೇವೆ. ಗೌಪ್ಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಕಸ ಬಿಸಾಡಿದವರನ್ನು ಗುರುತಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಮಂಜುನಾಥ್ ಪ.ಪಂ. ಮುಖ್ಯಾಧಿಕಾರಿ</p>.<p>Quote - ಬಹುತೇಕ ವಿದ್ಯಾವಂತರೆ ರಸ್ತೆಗಳಲ್ಲಿ ಕಸ ಬಿಸಾಡುತ್ತಿದ್ದಾರೆ. ಪಟ್ಟಣ ಪಂಚಾಯಿತಿ ಗಿಡಗಳನ್ನು ನೆಡುತ್ತಿರುವುದು ಶುಚಿತ್ವಕ್ಕೆ ಉತ್ತಮ ಸಂಕೇತ. ಇದಕ್ಕೆ ನಾಗರಿಕರು ಸ್ಪಂದಿಸಬೇಕು. ಕಸ ಬಿಸಾಡಿದವರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು. ಬಿ. ಮಂಜೇಗೌಡ ಆಲೂರು ನಿವಾಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>