ಆರ್ಟಿಒ ಕಚೇರಿ ಮೇಲೆ ಎಸಿಬಿ ದಾಳಿ

ಹಾಸನ: ಗ್ರಾಹಕರು ನೀಡಿದ ದೂರು ಆಧರಿಸಿ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ಸೋಮವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.
ನಗರ ಹೊರವಲಯದ ಬಿ. ಕಾಟಿಹಳ್ಳಿಯಲ್ಲಿರುವ ಕಚೇರಿ ಮೇಲೆ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಕಚೇರಿಯ ಗೇಟ್ ಹಾಗೂ ಬಾಗಿಲಿಗೆ ಬೀಗ ಹಾಕಿ ಸತತ ಮೂರು ತಾಸು ದಾಖಲೆಗಳ ಪರಿಶೀಲನೆ ನಡೆಸಿತು. ಬಳಿಕ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿತು.
ದಿಢೀರ್ ದಾಳಿಯಿಂದ ಆರ್.ಟಿ.ಒ ಸಿಬ್ಬಂದಿ ಕಕ್ಕಾಬಿಕ್ಕಿಯಾದರು. ಮಧ್ಯವರ್ತಿಗಳು ಬೆಚ್ಚಿ ಬಿದ್ದರು. ಕಚೇರಿ ಮಾತ್ರವಲ್ಲದೆ ಮುಂಭಾಗದ ಹಲವು ಅಂಗಡಿಗಳ ಮೇಲೂ ದಾಳಿ ನಡೆಯಿತು.
ಅಂಗಡಿಗಳಲ್ಲಿದ್ದ ಹಣ, ಚಾಲನಾ ಪರವಾನಗಿ, ಆರ್.ಸಿ ಬುಕ್ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಸಂಜೆವರೆಗೂ ಸಿಬ್ಬಂದಿ ವಿಚಾರಣೆ ನಡೆಯಿತು. ದಾಳಿ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಇರಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.