ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ₹20 ಸಾವಿರ ಪಡೆದು ಸಿಕ್ಕಿಬಿದ್ದ ಗ್ರಾಮಲೆಕ್ಕಿಗ

Last Updated 18 ಆಗಸ್ಟ್ 2021, 12:10 IST
ಅಕ್ಷರ ಗಾತ್ರ

ಹಾಸನ: ಸಕಲೇಶಪುರ ತಾಲ್ಲೂಕಿನ ಚಂಗಡಿಹಳ್ಳಿ ಗ್ರಾಮ ಲೆಕ್ಕಿಗ ಹರಿ ಪ್ರಸಾದ್‌ ಅವರು ಬಗರ್ ಹುಕುಂ ಸಾಗುವಳಿ ಚೀಟಿ ನೀಡಲು ಪರಿಶೀಲನಾ ವರದಿಗಾಗಿ ವ್ಯಕ್ತಿಯಿಂದ ಬುಧವಾರ ಲಂಚಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ದಾಳಿ ನಡೆಸಿದ್ದಾರೆ.

ಪರಿಶೀಲನಾ ವರದಿ ನೀಡಲು ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮದ ದರ್ಶನ್ ಅವರಿಗೆ ₹20ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು. ಪೂರ್ತಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಡಿವೈಎಸ್‌ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಶಿಲ್ಪಾ, ವೀಣಾ ಮತ್ತು ಸಿಬ್ಬಂದಿ ದಾಳಿನಡೆಸಿದ್ದರು. ಗ್ರಾಮ ಲೆಕ್ಕಿಗನನ್ನು ಬಂಧಿಸಿ, ಹಣ ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT