ಹಾಸನ: ಬೈಕ್ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ 108 ಆಂಬುಲೆನ್ಸ್ ಚಾಲಕನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಸನ ತಾಲ್ಲೂಕಿನ ತಾಚೇನಹಳ್ಳಿಯ ಕೃಷ್ಣಮೂರ್ತಿ ಅವರು ಹೊಳೆನರಸೀಪುರ ತಾಲ್ಲೂಕಿನ ಮೊಸಳೆಹೊಸಳ್ಳಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಕೈಗಾರಿಕಾ ಪ್ರದೇಶದ ಕಡೆಯಿಂದ ವೇಗವಾಗಿ ಬಂದ ಲಾರಿ, ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕ ಸವಾರನ ಹೆಲ್ಮೆಟ್ ನೂರು ಅಡಿ ದೂರ ಬಿತ್ತು. ಕೃಷ್ಣಮೂರ್ತಿ ಅವರ ತಲೆಗೆ ಪೆಟ್ಟು ಬಿದ್ದು ರಕ್ತ ಸೋರಿಕೆಯಾಯಿತು.