ಹೊಳೆನರಸೀಪುರ: ತಾಲ್ಲೂಕಿನ ಹಿರೇಬೆಳಗುಲಿ ಕ್ರಾಸ್ನಲ್ಲಿ ಶುಕ್ರವಾರ ಸಂಜೆ ಕಾರು ಪಾದಚಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಉರುಳಿದೆ. ಅಪಘಾತದಲ್ಲಿ ಪಾದಚಾರಿಸ್ಥಳದಲ್ಲೇಮೃತಪಟ್ಟಿದ್ದಾರೆ.
ಹಿರೇಬೆಳಗುಲಿ ಗ್ರಾಮದ ರಾಮಸ್ವಾಮಿ (55) ಮೃತಪಟ್ಟವರು.ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.
ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಾಮಸ್ವಾಮಿ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.