‘ಪ್ರತಿಭಟನಾಕಾರರು ಕಾನೂನು, ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪ್ರತಿಭಟನೆ ನಡೆಯುವ ಸಮಯದಲ್ಲಿ ಯಾವುದೇ ರೀತಿಯ ಗಲಭೆ, ಗಲಾಟೆ ಸಾರ್ವಜನಿಕರ ಆಸ್ತಿ ನಷ್ಟ ಇತರೆ ಅಹಿತಕರ ಘಟನೆಗಳು ನಡೆದಲ್ಲಿ ಹಾಗೂ ಟೈರ್ಗಳಿಗೆ ಬೆಂಕಿ ಹಚ್ಚುವುದು, ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರುವುದು ಮತ್ತು ಬಲವಂತವಾಗಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುವಂತೆ ಒತ್ತಾಯ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.