<p><strong>ಅರಸೀಕೆರೆ: ‘</strong>ದಿನಪೂರ್ತಿ ರೈತರಿಗೆ ವಿದ್ಯುತ್ ನೀಡಲು 350 ಎಕರೆ ಸರ್ಕಾರಿ ಜಮೀನಿನಲ್ಲಿ ವಿದ್ಯುತ್ ಉತ್ಪತೀ ಮಾಡಲು ಯೋಜನೆಗೆ ಚಾಲನೆ ದೊರೆಯಲಿದೆ’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p>.<p>ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಣ್ಣ ನೀರಾವರಿ ಇಲಾಖೆಯಿಂದ 35 ಫಲಾನುಭವಿಗಳಿಗೆ ಪಂಪ್ ಮತ್ತು ಮೋಟಾರ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ರೈತರ ಆರ್ಥಿಕ ಸುಧಾರಣೆ ಹಾಗೂ ರೈತರು ಸದಾ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಎತ್ತಿನ ಹೊಳೆ ಯೋಜನೆ ಮೂಲಕ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸುವುದು ಹಾಗೂ ಅಗತ್ಯ ವಿದ್ಯುತ್ ತಾಲ್ಲೂಕಿನಲ್ಲೇ ಉತ್ಪತ್ತಿ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಗ್ರಾಮೀಣ ಭಾಗದ ಅಭಿವೃದ್ದಿಯಾಗದ ಹೊರತು ಕ್ಷೇತ್ರದ ಅಭಿವೃದ್ದಿ ಸಾಧ್ಯವಿಲ್ಲ ಎಂದು ಮನಗೊಂಡು ಶಾಸಕನಾದ ಮೇಲೆ 3 ರಿಂದ 4 ಸಾವಿರ ಬೋರೆವೆಲ್ ಕೊರೆಸಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಸಾವಿರಾರು ಕುಟುಂಬಗಳ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೈನುಗಾರಿಕೆ ಸೇರಿದಂತೆ ಇನ್ನಿತರ ಚಟುವಟಿಕೆ ಮೂಲಕ ತಮ್ಮ ಬದುಕನ್ನು ಕಟ್ಟಿಕೊಂಡಿದ್ದು ಗಂಗಾ ಕಲ್ಯಾಣ ಯೋಜನೆ ನಿರುದ್ಯೋಗ ನಿವಾರಿಸುವಲ್ಲಿ ಪ್ರಮುಖ ಅಸ್ತ್ರವಾಗಿದೆ’ ಎಂದರು.</p>.<p>‘ಕ್ಷೇತ್ರದಲ್ಲಿ ಸಾವಿರಾರು ಚೆಕ್ಡ್ಯಾಮ್ ನಿರ್ಮಿಸಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿದ್ದು ಎಲ್ಲಾ ಬೋರೆವೆಲ್ಗಳಲ್ಲಿ ಸಮಗ್ರ ನೀರು ದೊರೆಯುತ್ತಿದ್ದು ಬೋರೆವೆಲ್ಗಳ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಕಣಕಟ್ಟೆ ಹೋಬಳಿಯ 8 ಕೆರೆಗಳಿಗೆ ನೀರು ಹರಿಸಲಾಗಿದ್ದು ಬಾಗಿನ ಅರ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸಿ ರೈತರು ಸದಾ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲಾಗುವುದು’ ಎಂದರು.</p>.<p>‘ರೈತರ ಅರ್ಥಿಕ ಜೀವನಮಟ್ಟ ಸುಧಾರಿಸಲು ಈ ವರ್ಷವು ಗಂಗಾ ಕಲ್ಯಾಣ ಯೋಜನೆಯ ಮೂಲಕ ಬೋರೆವೆಲ್ ಕೊರೆಸಿ ಮತ್ತಷ್ಟು ಫಲಾನುಭವಿಗಳಿಗೆ ಪಂಪ್ ಮೋಟಾರ್ ವಿತರಿಸಲಾಗುವುದು. ಕ್ಷೇತ್ರದ ರೈತರನ್ನು ಸಂಕಷ್ಟದಿಂದ ದೂರ ಮಾಡಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುವುದು’ ಎಂದು ಹೇಳಿದರು.</p>.<p>ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುಂದರ್ ರಾಜ್, ಕಿರಿಯ ಎಂಜಿನಿಯರ್ ಉಮೇಶ್, ಸಹಾಯಕ ಎಂಜಿನಿಯರ್ ಗಂಗಾಧರ್, ಸಿಬ್ಬಂದಿ ವರ್ಗದವರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ: ‘</strong>ದಿನಪೂರ್ತಿ ರೈತರಿಗೆ ವಿದ್ಯುತ್ ನೀಡಲು 350 ಎಕರೆ ಸರ್ಕಾರಿ ಜಮೀನಿನಲ್ಲಿ ವಿದ್ಯುತ್ ಉತ್ಪತೀ ಮಾಡಲು ಯೋಜನೆಗೆ ಚಾಲನೆ ದೊರೆಯಲಿದೆ’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p>.<p>ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಣ್ಣ ನೀರಾವರಿ ಇಲಾಖೆಯಿಂದ 35 ಫಲಾನುಭವಿಗಳಿಗೆ ಪಂಪ್ ಮತ್ತು ಮೋಟಾರ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ರೈತರ ಆರ್ಥಿಕ ಸುಧಾರಣೆ ಹಾಗೂ ರೈತರು ಸದಾ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಎತ್ತಿನ ಹೊಳೆ ಯೋಜನೆ ಮೂಲಕ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸುವುದು ಹಾಗೂ ಅಗತ್ಯ ವಿದ್ಯುತ್ ತಾಲ್ಲೂಕಿನಲ್ಲೇ ಉತ್ಪತ್ತಿ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಗ್ರಾಮೀಣ ಭಾಗದ ಅಭಿವೃದ್ದಿಯಾಗದ ಹೊರತು ಕ್ಷೇತ್ರದ ಅಭಿವೃದ್ದಿ ಸಾಧ್ಯವಿಲ್ಲ ಎಂದು ಮನಗೊಂಡು ಶಾಸಕನಾದ ಮೇಲೆ 3 ರಿಂದ 4 ಸಾವಿರ ಬೋರೆವೆಲ್ ಕೊರೆಸಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಸಾವಿರಾರು ಕುಟುಂಬಗಳ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೈನುಗಾರಿಕೆ ಸೇರಿದಂತೆ ಇನ್ನಿತರ ಚಟುವಟಿಕೆ ಮೂಲಕ ತಮ್ಮ ಬದುಕನ್ನು ಕಟ್ಟಿಕೊಂಡಿದ್ದು ಗಂಗಾ ಕಲ್ಯಾಣ ಯೋಜನೆ ನಿರುದ್ಯೋಗ ನಿವಾರಿಸುವಲ್ಲಿ ಪ್ರಮುಖ ಅಸ್ತ್ರವಾಗಿದೆ’ ಎಂದರು.</p>.<p>‘ಕ್ಷೇತ್ರದಲ್ಲಿ ಸಾವಿರಾರು ಚೆಕ್ಡ್ಯಾಮ್ ನಿರ್ಮಿಸಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿದ್ದು ಎಲ್ಲಾ ಬೋರೆವೆಲ್ಗಳಲ್ಲಿ ಸಮಗ್ರ ನೀರು ದೊರೆಯುತ್ತಿದ್ದು ಬೋರೆವೆಲ್ಗಳ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಕಣಕಟ್ಟೆ ಹೋಬಳಿಯ 8 ಕೆರೆಗಳಿಗೆ ನೀರು ಹರಿಸಲಾಗಿದ್ದು ಬಾಗಿನ ಅರ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸಿ ರೈತರು ಸದಾ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲಾಗುವುದು’ ಎಂದರು.</p>.<p>‘ರೈತರ ಅರ್ಥಿಕ ಜೀವನಮಟ್ಟ ಸುಧಾರಿಸಲು ಈ ವರ್ಷವು ಗಂಗಾ ಕಲ್ಯಾಣ ಯೋಜನೆಯ ಮೂಲಕ ಬೋರೆವೆಲ್ ಕೊರೆಸಿ ಮತ್ತಷ್ಟು ಫಲಾನುಭವಿಗಳಿಗೆ ಪಂಪ್ ಮೋಟಾರ್ ವಿತರಿಸಲಾಗುವುದು. ಕ್ಷೇತ್ರದ ರೈತರನ್ನು ಸಂಕಷ್ಟದಿಂದ ದೂರ ಮಾಡಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುವುದು’ ಎಂದು ಹೇಳಿದರು.</p>.<p>ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುಂದರ್ ರಾಜ್, ಕಿರಿಯ ಎಂಜಿನಿಯರ್ ಉಮೇಶ್, ಸಹಾಯಕ ಎಂಜಿನಿಯರ್ ಗಂಗಾಧರ್, ಸಿಬ್ಬಂದಿ ವರ್ಗದವರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>