<p><strong>ಹಾಸನ:</strong> ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತು ಸಾವಿರ ದಾಟಿದೆ. ಒಂದೇ ದಿನ 1603 ಜನರಿಗೆ ಸೋಂಕು ತಗುಲಿದ್ದು,ಚಿಕಿತ್ಸೆಗೆ ಸ್ಪಂದಿಸದೆ 10 ಮಂದಿ ಮೃತಪಟ್ಟಿದ್ದಾರೆ.</p>.<p>ಒಟ್ಟು ಸೋಂಕಿತರ ಸಂಖ್ಯೆ 46695ಕ್ಕೆ ಏರಿಕೆಯಾಗಿದ್ದು, ಸಕ್ರಿಯಪ್ರಕರಣಗಳ ಸಂಖ್ಯೆ 10927 ತಲುಪಿದೆ. ಇದರಲ್ಲಿ 1500ಕ್ಕೂಹೆಚ್ಚು ಜನರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಉಳಿದವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. 95 ಜನ ಐಸಿಯುನಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ 631ಕ್ಕೆ ಏರಿಕೆಯಾಗಿದೆ.</p>.<p>ಹೊಸದಾಗಿ ಆಲೂರು ತಾಲ್ಲೂಕು 19, ಅರಕಲಗೂಡು 107, ಅರಸೀಕೆರೆ 122, ಬೇಲೂರು 43, ಚನ್ನರಾಯಪಟ್ಟಣ 408, ಹಾಸನ 509,ಹೊಳೆನರಸೀಪುರ 186, ಸಕಲೇಶಪುರ 161, ಇತರೆ ಜಿಲ್ಲೆಯ 48 ಮಂದಿಗೆ<br />ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<p>ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸಲು ಸಮಾಜ ಕಲ್ಯಾಣ ಇಲಾಖೆ ವಸತಿನಿಲಯಗಳ ಮಂಚ, ಹಾಸಿಗೆಯನ್ನು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಹಾಸನ ವ್ಯಾಪ್ತಿಯ 100 ಹಾಗೂ ಎಲ್ಲ ತಾಲ್ಲೂಕುಗಳಿಂದ ಒಟ್ಟು 235<br />ಮಂಚಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದೆ.</p>.<p>ತಾಲ್ಲೂಕಿನ ಮೊಸಳೆ ಹೊಸಹಳ್ಳಿ, ದುದ್ದ, ಅರಸೀಕೆರೆ ಗಂಡಸಿಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಂಗಳವಾರದಿಂದಲೇಆಮ್ಲಜನಕ ಸಹಿತ ಬೆಡ್ ವ್ಯವಸ್ಥೆಯನ್ನು ಆರೋಗ್ಯ ಅಧಿಕಾರಿಗಳುಮಾಡಿಕೊಂಡಿದ್ದಾರೆ.<br />ಜಿಲ್ಲಾಧಿಕಾರಿ ಆರ್.ಗಿರೀಶ್ ಅವರ ನಿರ್ದೇಶನ ಹಿನ್ನೆಲೆಯಲ್ಲಿ ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಹಾಸ್ಟೆಲ್ಗಳಲ್ಲಿನಮಂಚಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸುವಂತೆ ತಾಲ್ಲೂಕು<br />ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತು ಸಾವಿರ ದಾಟಿದೆ. ಒಂದೇ ದಿನ 1603 ಜನರಿಗೆ ಸೋಂಕು ತಗುಲಿದ್ದು,ಚಿಕಿತ್ಸೆಗೆ ಸ್ಪಂದಿಸದೆ 10 ಮಂದಿ ಮೃತಪಟ್ಟಿದ್ದಾರೆ.</p>.<p>ಒಟ್ಟು ಸೋಂಕಿತರ ಸಂಖ್ಯೆ 46695ಕ್ಕೆ ಏರಿಕೆಯಾಗಿದ್ದು, ಸಕ್ರಿಯಪ್ರಕರಣಗಳ ಸಂಖ್ಯೆ 10927 ತಲುಪಿದೆ. ಇದರಲ್ಲಿ 1500ಕ್ಕೂಹೆಚ್ಚು ಜನರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಉಳಿದವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. 95 ಜನ ಐಸಿಯುನಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ 631ಕ್ಕೆ ಏರಿಕೆಯಾಗಿದೆ.</p>.<p>ಹೊಸದಾಗಿ ಆಲೂರು ತಾಲ್ಲೂಕು 19, ಅರಕಲಗೂಡು 107, ಅರಸೀಕೆರೆ 122, ಬೇಲೂರು 43, ಚನ್ನರಾಯಪಟ್ಟಣ 408, ಹಾಸನ 509,ಹೊಳೆನರಸೀಪುರ 186, ಸಕಲೇಶಪುರ 161, ಇತರೆ ಜಿಲ್ಲೆಯ 48 ಮಂದಿಗೆ<br />ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<p>ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸಲು ಸಮಾಜ ಕಲ್ಯಾಣ ಇಲಾಖೆ ವಸತಿನಿಲಯಗಳ ಮಂಚ, ಹಾಸಿಗೆಯನ್ನು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಹಾಸನ ವ್ಯಾಪ್ತಿಯ 100 ಹಾಗೂ ಎಲ್ಲ ತಾಲ್ಲೂಕುಗಳಿಂದ ಒಟ್ಟು 235<br />ಮಂಚಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದೆ.</p>.<p>ತಾಲ್ಲೂಕಿನ ಮೊಸಳೆ ಹೊಸಹಳ್ಳಿ, ದುದ್ದ, ಅರಸೀಕೆರೆ ಗಂಡಸಿಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಂಗಳವಾರದಿಂದಲೇಆಮ್ಲಜನಕ ಸಹಿತ ಬೆಡ್ ವ್ಯವಸ್ಥೆಯನ್ನು ಆರೋಗ್ಯ ಅಧಿಕಾರಿಗಳುಮಾಡಿಕೊಂಡಿದ್ದಾರೆ.<br />ಜಿಲ್ಲಾಧಿಕಾರಿ ಆರ್.ಗಿರೀಶ್ ಅವರ ನಿರ್ದೇಶನ ಹಿನ್ನೆಲೆಯಲ್ಲಿ ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಹಾಸ್ಟೆಲ್ಗಳಲ್ಲಿನಮಂಚಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸುವಂತೆ ತಾಲ್ಲೂಕು<br />ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>