<p><strong>ಹಾಸನ: </strong>‘ಪಕ್ಷದ ಜತೆಗೆ ಸದೃಢ ದೇಶವನ್ನು ಕಟ್ಟುವ ಕನಸನ್ನು ಬಿಜೆಪಿ ಕಂಡಿದ್ದು, ಅದರ ಸಾಕಾರಕ್ಕೆ ಪ್ರತಿ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕು’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ. ಸುರೇಶ್ ಸಲಹೆ<br />ನೀಡಿದರು.</p>.<p>ನಗರದ ಶ್ರೀರಾಮ ಮಂದಿರದಲ್ಲಿ ಶುಕ್ರವಾರ ನಡೆದ ಬಿಜೆಪಿ ನಗರ ಮಂಡಲ ಪ್ರಶಿಕ್ಷಣ ಹಾಗೂ ಹತ್ತು ಅಂಶಗಳ ವಿಷಯ ಚರ್ಚೆ ಸಭೆ ಉದ್ಘಾಟಿಸಿ ಮಾತನಾಡಿದರು.</p>.<p>‘ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಮಾತನ್ನು ಹಿರಿಯರು ಹೇಳಿದ್ದಾರೆ. ಈ ತತ್ವ ನಿಷ್ಠೆಯೇದೇಶದಾದ್ಯಂತ ಬಿಜೆಪಿ ಗೆಲುವಿಗೆ ಸಹಕಾರಿಯಾಗಿದೆ. ಪ್ರತಿ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದರು.</p>.<p>‘2014ರ ಲೋಕಸಭೆ ಚುನಾವಣೆಗೆ ಮೊದಲು ದೇಶದಲ್ಲಿ ಬಿಜೆಪಿ ಸ್ಥಿತಿ ಹೇಗಿತ್ತು ಹಾಗೂ ಈಗ ಯಾವ ಸ್ಥಾನದಲ್ಲಿದ್ದೇವೆ ಎಂಬುದರ ವಿಮರ್ಶೆ ನಡೆಯಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ವಿಶ್ವ ಗುರುವಾಗುವತ್ತ ದಾಪುಗಾಲಿಡುತ್ತಿದೆ’ ಎಂದು ಹೇಳಿದರು.</p>.<p>ನಗರ ಮಂಡಲ ಅಧ್ಯಕ್ಷ ಎಸ್.ಕೆ. ವೇಣುಗೋಪಾಲ್ ಮಾತನಾಡಿ, ‘ಪ್ರಶಿಕ್ಷಣ ವರ್ಗವು ಎಲ್ಲ ಕಾರ್ಯಕರ್ತರು ಒಂದೆಡೆ ಸೇರುವ ಸುಸಂದರ್ಭವಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಶಕ್ತಿಯುತವಾಗಿದ್ದು, ಯಾವುದೇ ಕ್ಷೇತ್ರದ ಚುನಾವಣೆ ನಡೆದರೂ ಹಾಸನದ ಕಾರ್ಯಕರ್ತರು ಅಲ್ಲಿರುತ್ತಾರೆ’ ಎಂದರು.</p>.<p>ಬಿಜೆಪಿ ಮುಖಂಡ ನವಿಲೆ ಅಣ್ಣಪ್ಪ, ಮೈಸೂರು ವಿಭಾಗ ಮುಖಂಡ ಕುಮಾರಸ್ವಾಮಿ, ಪದ್ಮನಾಭ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>‘ಪಕ್ಷದ ಜತೆಗೆ ಸದೃಢ ದೇಶವನ್ನು ಕಟ್ಟುವ ಕನಸನ್ನು ಬಿಜೆಪಿ ಕಂಡಿದ್ದು, ಅದರ ಸಾಕಾರಕ್ಕೆ ಪ್ರತಿ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕು’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ. ಸುರೇಶ್ ಸಲಹೆ<br />ನೀಡಿದರು.</p>.<p>ನಗರದ ಶ್ರೀರಾಮ ಮಂದಿರದಲ್ಲಿ ಶುಕ್ರವಾರ ನಡೆದ ಬಿಜೆಪಿ ನಗರ ಮಂಡಲ ಪ್ರಶಿಕ್ಷಣ ಹಾಗೂ ಹತ್ತು ಅಂಶಗಳ ವಿಷಯ ಚರ್ಚೆ ಸಭೆ ಉದ್ಘಾಟಿಸಿ ಮಾತನಾಡಿದರು.</p>.<p>‘ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಮಾತನ್ನು ಹಿರಿಯರು ಹೇಳಿದ್ದಾರೆ. ಈ ತತ್ವ ನಿಷ್ಠೆಯೇದೇಶದಾದ್ಯಂತ ಬಿಜೆಪಿ ಗೆಲುವಿಗೆ ಸಹಕಾರಿಯಾಗಿದೆ. ಪ್ರತಿ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದರು.</p>.<p>‘2014ರ ಲೋಕಸಭೆ ಚುನಾವಣೆಗೆ ಮೊದಲು ದೇಶದಲ್ಲಿ ಬಿಜೆಪಿ ಸ್ಥಿತಿ ಹೇಗಿತ್ತು ಹಾಗೂ ಈಗ ಯಾವ ಸ್ಥಾನದಲ್ಲಿದ್ದೇವೆ ಎಂಬುದರ ವಿಮರ್ಶೆ ನಡೆಯಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ವಿಶ್ವ ಗುರುವಾಗುವತ್ತ ದಾಪುಗಾಲಿಡುತ್ತಿದೆ’ ಎಂದು ಹೇಳಿದರು.</p>.<p>ನಗರ ಮಂಡಲ ಅಧ್ಯಕ್ಷ ಎಸ್.ಕೆ. ವೇಣುಗೋಪಾಲ್ ಮಾತನಾಡಿ, ‘ಪ್ರಶಿಕ್ಷಣ ವರ್ಗವು ಎಲ್ಲ ಕಾರ್ಯಕರ್ತರು ಒಂದೆಡೆ ಸೇರುವ ಸುಸಂದರ್ಭವಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಶಕ್ತಿಯುತವಾಗಿದ್ದು, ಯಾವುದೇ ಕ್ಷೇತ್ರದ ಚುನಾವಣೆ ನಡೆದರೂ ಹಾಸನದ ಕಾರ್ಯಕರ್ತರು ಅಲ್ಲಿರುತ್ತಾರೆ’ ಎಂದರು.</p>.<p>ಬಿಜೆಪಿ ಮುಖಂಡ ನವಿಲೆ ಅಣ್ಣಪ್ಪ, ಮೈಸೂರು ವಿಭಾಗ ಮುಖಂಡ ಕುಮಾರಸ್ವಾಮಿ, ಪದ್ಮನಾಭ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>