ಹಾಸನ: ಅಂಗಾಂಶ ಕೃಷಿ 'ಕುಡಿಕಂಡ' ಆಲೂಗಡ್ಡೆ ಸಸಿಗಳನ್ನು ತಾಲ್ಲೂಕಿನ ವಿವಿಧ ರೈತರು ಪ್ರಯೋಗವಾಗಿ ಬೆಳೆಯುತ್ತಿದ್ದು, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥ ಮಹೇಶ್ ಹಾಗೂ ಇತರೆ ವಿಜ್ಞಾನಿಗಳು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಚ್.ಎಸ್. ರವಿ ಅವರೊಂದಿಗೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲಿಸಿದರು.