<p><strong>ಹಾಸನ : </strong>ಅಗ್ರಿಗೋಲ್ಡ್ ಸಂಸ್ಥೆಯಿಂದ ವಂಚನೆ ಒಳಗಾಗಿರುವ ಗ್ರಾಹಕರು ಹಾಗೂ ಏಜೆಂಟರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಫೆ. 1ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಗ್ರಿಗೋಲ್ಡ್ ಕಸ್ಟಮರ್ ಮತ್ತು ಏಜೆಂಟ್ ವೆಲ್ ಫೇರ್ ಅಸೋಸಿಯೇಷನ್ ಜಿಲ್ಲಾ ಘಟಕದ ಗೌರವಾಧ್ಯಕ್ಷ ಎಂ.ಸಿ.ಡೋಂಗ್ರೆ ಹೇಳಿದರು.</p>.<p>‘1995ರಲ್ಲಿ ಆರಂಭವಾದ ಸಂಸ್ಥೆ ಅಂದಾಜು 8.50 ಲಕ್ಷ ಗ್ರಾಹಕರಿಂದ ಸುಮಾರು ₹ 2,500 ಕೋಟಿ ಹಣವನ್ನು ಠೇವಣಿಯಾಗಿ ಸಂಗ್ರಹಿಸಿತ್ತು. ದೇಶದ ಎಂಟು ರಾಜ್ಯಗಳಲ್ಲಿ ಸಂಸ್ಥೆಯ ಸುಮಾರು 32 ಲಕ್ಷ ಖಾತೆ ಹೊಂದಿದ್ದು, ಸುಮಾರು ₹ 7623 ಕೋಟಿ ಹಣವನ್ನು ಏಜೆಂಟರು ಹಾಗೂ ಗ್ರಾಹಕರಿಗೆ ಪಾವತಿಸಬೇಕಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಂಸ್ಥೆಯು ದಿವಾಳಿಯಾಗಿರುವ ಹಿನ್ನೆಲೆಯಲ್ಲಿ ಏಜೆಂಟರು ಹಾಗೂ ಗ್ರಾಹಕರು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಇದರಿಂದಾಗಿ 105 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜ್ಯ ಸರ್ಕಾರ ಸಂಸ್ಥೆಗೆ ಸೇರಿದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದೆ. ಇದರ ಬೆಲೆ ಕೇವಲ ₹ 500 ಕೋಟಿಯಾಗಿದ್ದು, ಕರ್ನಾಟಕದ ಗ್ರಾಹಕರಿಗೆ ಸುಮಾರು ₹ 2,500 ಕೋಟಿ ಹಾಗೂ ಜಿಲ್ಲೆಯ ಸುಮಾರು 500 ಜನ ಏಜೆಂಟರಿಗೆ ಅಂದಾಜು ₹ 500 ಕೋಟಿಯಷ್ಟು ಹಣ ಸಂಸ್ಥೆಯಿಂದ ಸಿಗಬೇಕಾಗಿದೆ ಎಂದು ಮಾಹಿತಿ ನೀಡಿದರು.</p>.<p>ಆಂಧ್ರ ಪ್ರದೇಶದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆಯ ಆಸ್ತಿಗಳನ್ನು ಅಲ್ಲಿನ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ಅಲ್ಲಿನ ಸರ್ಕಾರ ಮಾರಾಟ ಮಾಡಬೇಕು. ಆ ರೀತಿ ಬಂದ ಹಣದಿಂದ ಕರ್ನಾಟಕದಲ್ಲಿ ವಂಚನೆಗೆ ಒಳಗಾದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಆಂಧ್ರಪ್ರದೇಶದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ತೀವ್ರ ಹೋರಾಟ ನಡೆಸಿದ್ದರ ಪರಿಣಾಮವಾಗಿ ಅಲ್ಲಿನ ಸರ್ಕಾರ ಈಗ ₹ 5000 ಕ್ಕಿಂತ ಕಡಿಮೆ ಮೊತ್ತದ ಠೇವಣಿದಾರರಿಗೆ ಪರಿಹಾರ ನೀಡಲು ₹ 300 ಕೋಟಿ ಮೀಸಲಿರಿಸಿದೆ ಹಾಗೂ ಆತ್ಮಹತ್ಯೆಗೊಳಗಾದ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ. ರಾಜ್ಯದಲ್ಲೂ ಆಂಧ್ರಪ್ರದೇಶ ಮಾದರಿಯಲ್ಲೇ ಪರಿಹಾರ ಸಿಗಬೇಕೆಂದು ಒತ್ತಾಯಿಸಿ ಗ್ರಾಹಕರು ಹಾಗೂ ಏಜೆಂಟರು ಫೆ. 1ರಂದು ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಧರಣಿ ನಡೆಸುವರು. ಹೋರಾಟದಲ್ಲಿ ವಂಚನೆಗೊಳಗಾಗಿರುವ ಎಲ್ಲರೂ ಭಾಗವಹಿಸಬೇಕೆಂದು ಮನವಿ ಮಾಡಿದರು.</p>.<p>ವೆಲ್ ಫೇರ್ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಯೋಗೀಶ್, ಖಜಾಂಚಿ ಗಣೇಶ್, ಉಪ ಕಾರ್ಯದರ್ಶಿ ಎಂ.ಸಿ.ಮಂಜೇಗೌಡ, ಸದಸ್ಯರಾದ ಮೋಹನ್ ಕುಮಾರ್, ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ : </strong>ಅಗ್ರಿಗೋಲ್ಡ್ ಸಂಸ್ಥೆಯಿಂದ ವಂಚನೆ ಒಳಗಾಗಿರುವ ಗ್ರಾಹಕರು ಹಾಗೂ ಏಜೆಂಟರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಫೆ. 1ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಗ್ರಿಗೋಲ್ಡ್ ಕಸ್ಟಮರ್ ಮತ್ತು ಏಜೆಂಟ್ ವೆಲ್ ಫೇರ್ ಅಸೋಸಿಯೇಷನ್ ಜಿಲ್ಲಾ ಘಟಕದ ಗೌರವಾಧ್ಯಕ್ಷ ಎಂ.ಸಿ.ಡೋಂಗ್ರೆ ಹೇಳಿದರು.</p>.<p>‘1995ರಲ್ಲಿ ಆರಂಭವಾದ ಸಂಸ್ಥೆ ಅಂದಾಜು 8.50 ಲಕ್ಷ ಗ್ರಾಹಕರಿಂದ ಸುಮಾರು ₹ 2,500 ಕೋಟಿ ಹಣವನ್ನು ಠೇವಣಿಯಾಗಿ ಸಂಗ್ರಹಿಸಿತ್ತು. ದೇಶದ ಎಂಟು ರಾಜ್ಯಗಳಲ್ಲಿ ಸಂಸ್ಥೆಯ ಸುಮಾರು 32 ಲಕ್ಷ ಖಾತೆ ಹೊಂದಿದ್ದು, ಸುಮಾರು ₹ 7623 ಕೋಟಿ ಹಣವನ್ನು ಏಜೆಂಟರು ಹಾಗೂ ಗ್ರಾಹಕರಿಗೆ ಪಾವತಿಸಬೇಕಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಂಸ್ಥೆಯು ದಿವಾಳಿಯಾಗಿರುವ ಹಿನ್ನೆಲೆಯಲ್ಲಿ ಏಜೆಂಟರು ಹಾಗೂ ಗ್ರಾಹಕರು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಇದರಿಂದಾಗಿ 105 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜ್ಯ ಸರ್ಕಾರ ಸಂಸ್ಥೆಗೆ ಸೇರಿದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದೆ. ಇದರ ಬೆಲೆ ಕೇವಲ ₹ 500 ಕೋಟಿಯಾಗಿದ್ದು, ಕರ್ನಾಟಕದ ಗ್ರಾಹಕರಿಗೆ ಸುಮಾರು ₹ 2,500 ಕೋಟಿ ಹಾಗೂ ಜಿಲ್ಲೆಯ ಸುಮಾರು 500 ಜನ ಏಜೆಂಟರಿಗೆ ಅಂದಾಜು ₹ 500 ಕೋಟಿಯಷ್ಟು ಹಣ ಸಂಸ್ಥೆಯಿಂದ ಸಿಗಬೇಕಾಗಿದೆ ಎಂದು ಮಾಹಿತಿ ನೀಡಿದರು.</p>.<p>ಆಂಧ್ರ ಪ್ರದೇಶದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆಯ ಆಸ್ತಿಗಳನ್ನು ಅಲ್ಲಿನ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ಅಲ್ಲಿನ ಸರ್ಕಾರ ಮಾರಾಟ ಮಾಡಬೇಕು. ಆ ರೀತಿ ಬಂದ ಹಣದಿಂದ ಕರ್ನಾಟಕದಲ್ಲಿ ವಂಚನೆಗೆ ಒಳಗಾದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಆಂಧ್ರಪ್ರದೇಶದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ತೀವ್ರ ಹೋರಾಟ ನಡೆಸಿದ್ದರ ಪರಿಣಾಮವಾಗಿ ಅಲ್ಲಿನ ಸರ್ಕಾರ ಈಗ ₹ 5000 ಕ್ಕಿಂತ ಕಡಿಮೆ ಮೊತ್ತದ ಠೇವಣಿದಾರರಿಗೆ ಪರಿಹಾರ ನೀಡಲು ₹ 300 ಕೋಟಿ ಮೀಸಲಿರಿಸಿದೆ ಹಾಗೂ ಆತ್ಮಹತ್ಯೆಗೊಳಗಾದ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ. ರಾಜ್ಯದಲ್ಲೂ ಆಂಧ್ರಪ್ರದೇಶ ಮಾದರಿಯಲ್ಲೇ ಪರಿಹಾರ ಸಿಗಬೇಕೆಂದು ಒತ್ತಾಯಿಸಿ ಗ್ರಾಹಕರು ಹಾಗೂ ಏಜೆಂಟರು ಫೆ. 1ರಂದು ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಧರಣಿ ನಡೆಸುವರು. ಹೋರಾಟದಲ್ಲಿ ವಂಚನೆಗೊಳಗಾಗಿರುವ ಎಲ್ಲರೂ ಭಾಗವಹಿಸಬೇಕೆಂದು ಮನವಿ ಮಾಡಿದರು.</p>.<p>ವೆಲ್ ಫೇರ್ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಯೋಗೀಶ್, ಖಜಾಂಚಿ ಗಣೇಶ್, ಉಪ ಕಾರ್ಯದರ್ಶಿ ಎಂ.ಸಿ.ಮಂಜೇಗೌಡ, ಸದಸ್ಯರಾದ ಮೋಹನ್ ಕುಮಾರ್, ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>