‘ ಜ. 10ರಂದು ಅರೆಕೆರೆ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ರಾಜಧನ ಕಟ್ಟದೆ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ವಶಪಡಿಸಿಕೊಂಡಿದ್ದರು. ಮರಳು ಸಂಗ್ರಹಕ್ಕೆ ನಾನು ಶಿಫಾರಸ್ಸು ಮಾಡಿದ್ದೇನೆ ಎಂದು ಕಂಪನಿಯ ಭದ್ರತಾ ಸಿಬ್ಬಂದಿ ನೀಡಿದ ಮಾಹಿತಿ ಆಧರಿಸಿ ಡಿ.ಸಿ ನೋಟಿಸ್ ನೀಡಿದ್ದಾರೆ. ಆದರೆ, ಗ್ರಾಮದ ಜಮೀನು ಸೌಭಾಗ್ಯ ಎಂಬುವರಿಗೆ ಸೇರಿದ್ದು, ಅಲ್ಲಿ ದಾಸ್ತಾನು ಮಾಡಿದ್ದ ಮರಳಿಗೂ ನನಗೂ ಯಾವುದೇ ಸಬಂಧ ಇಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟ ಪಡಿಸಿದರು.