ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆನರಸೀಪುರ | ಅಕ್ಷಯ ತೃತೀಯ: ಚಿನ್ನ–ಬೆಳ್ಳಿ ವ್ಯಾಪಾರ ಜೋರು

Published 10 ಮೇ 2024, 13:39 IST
Last Updated 10 ಮೇ 2024, 13:39 IST
ಅಕ್ಷರ ಗಾತ್ರ

ಹೊಳೆನರಸೀಪುರ: ಪಟ್ಟಣದಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಶುಕ್ರವಾರ ಚಿನ್ನ– ಬೆಳ್ಳಿ ವರ್ತಕರು ಭರ್ಜರಿ ವ್ಯಾಪಾರ ವಹಿವಾಟು ನಡೆಸಿದರು.

ಭಾರತೀಯ ಸಂಸ್ಕೃತಿಯಲ್ಲಿ ಅಕ್ಷಯ ತೃತೀಯ ಅಥವಾ ಬಸವ ಜಯಂತಿ ದಿನದಂದು ಚಿನ್ನ ಖರೀದಿಸಿದರೆ ಒಳ್ಳೆಯದು ಎಂಬ ನಂಬಿಕೆ ಇದೆ. ಇದರಿಂದಾಗಿ ಮುಂಗಡವಾಗಿ ಹಣ ನೀಡಿ ವಿವಿಧ ವಿನ್ಯಾಸದ ಒಡವೆಗಳನ್ನು ಸಿದ್ದಪಡಿಸಲು ಗೃಹಣಿಯರು ಸೂಚಿಸಿದ್ದು, ಅಕ್ಷಯ ತೃತೀಯ ದಿನದಂದು ಪಡೆಯುತ್ತಾರೆ. ಕಾರ್ಪೊರೇಟ್ ಕಂಪನಿಗಳೂ ವಿವಿಧ ರೀತಿಯ ರಿಯಾಯಿತಿ ನೀಡುವ ಮೂಲಕ ಜನರನ್ನು ಆಕರ್ಷಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ವ್ಯಾಪಾರವು ಹೆಚ್ಚಾಗುತ್ತಿದೆ.

ತಾಲ್ಲೂಕು ಕೇಂದ್ರಗಳಲ್ಲಿ ಅಕ್ಷಯ ತೃತೀಯದಂದು ಯಾವುದೇ ಪ್ರಚಾರವಿಲ್ಲದೇ ಇದ್ದರೂ ಜನರು ಆಭರಣ ಅಂಗಡಿಗಳಿಗೆ ಭೇಟಿ ನೀಡಿ, ಖರೀದಿಯಲ್ಲಿ ತೊಡಗಿದ್ದು ಸಾಮಾನ್ಯವಾಗಿತ್ತು.

ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಪ್ರಯುಕ್ತ ಸರ್ವೆ ಜನ ಸುಖಿನೋ ಭವಂತು ಎಂಬ ಸಂಕಲ್ಪದೊಂದಿಗೆ ಸ್ವಾಮಿಯ ಮೂಲ ವಿಗ್ರಹಕ್ಕೆ ಅಭಿಷೇಕ, ಅಲಂಕಾರ ನೆರವೇರಿಸಿ ಸಹಸ್ರ ನಾಮರ್ಚನೆ, ಮಹಾ ಮಂಗಳಾರತಿ ಮಾಡಲಾಯಿತು. ನಂತರ ಭಕ್ತರಿಗೆ ತೀರ್ಥ– ಪ್ರಸಾದ ವಿನಿಯೋಗ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT